ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ.
2019ರಿಂದ 2024ರ ಅವಧಿಯಲ್ಲಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ಯುಕ್ತವಾದ ತುಪ್ಪ ಬಳಕೆ ಮಾಡಿರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಈ ಬಗ್ಗೆ ಗೊತ್ತಿದ್ದರೂ ಟಿಟಿಡಿ ತುಪ್ಪ ಖರೀದಿ ಮುಂದುವರಿಸಿತ್ತು ಎಂದು ಸಿಬಿಐ ಬಹಿರಂಗಪಡಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ತನಿಖಾ ತಂಡ ಆಂಧ್ರಪ್ರದೇಶ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ತುಪ್ಪದಲ್ಲಿ ಬೀಟಾ ಸೆಟೋಸ್ಟೇರಾಲ್ ಎಂಬ ರಾಸಾಯನಿಕ ಇರುವುದನ್ನು ಪತ್ತೆ ಮಾಡಿದ್ದು, ಗಂಭೀರ ಗುಣಮಟ್ಟ ಸಮಸ್ಯೆ ಬಗ್ಗೆ ತಿಳಿದುಕೊಂಡಿದ್ದರೂ ಟಿಟಿಡಿ ಕ್ರಮ ಕೈಗೊಳ್ಳಲು ವಿಫಲವಾಯಿತು.
2020ರಲ್ಲಿ ಟಿಟಿಡಿ ಅಧಿಕಾರಿಗಳು ಮೊದಲು ತುಪ್ಪದ ಟೆಂಡರ್ ನಿಯಮ ಬಿಗಿಗೊಳಿಸಿದರು. ನಂತರ ಯಾವುದೇ ಸ್ಪಷ್ಟನೆ ನೀಡದೇ ಕೇವಲ ಐದೇ ತಿಂಗಳಿನಲ್ಲಿ ಟೆಂಡರ್ ನಿಯಮ ಸಡಿಲಗೊಳಿಸಿದ್ದರು ಎಂದು ಹೇಳಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…