ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ.
2019ರಿಂದ 2024ರ ಅವಧಿಯಲ್ಲಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ಯುಕ್ತವಾದ ತುಪ್ಪ ಬಳಕೆ ಮಾಡಿರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಈ ಬಗ್ಗೆ ಗೊತ್ತಿದ್ದರೂ ಟಿಟಿಡಿ ತುಪ್ಪ ಖರೀದಿ ಮುಂದುವರಿಸಿತ್ತು ಎಂದು ಸಿಬಿಐ ಬಹಿರಂಗಪಡಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ತನಿಖಾ ತಂಡ ಆಂಧ್ರಪ್ರದೇಶ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ತುಪ್ಪದಲ್ಲಿ ಬೀಟಾ ಸೆಟೋಸ್ಟೇರಾಲ್ ಎಂಬ ರಾಸಾಯನಿಕ ಇರುವುದನ್ನು ಪತ್ತೆ ಮಾಡಿದ್ದು, ಗಂಭೀರ ಗುಣಮಟ್ಟ ಸಮಸ್ಯೆ ಬಗ್ಗೆ ತಿಳಿದುಕೊಂಡಿದ್ದರೂ ಟಿಟಿಡಿ ಕ್ರಮ ಕೈಗೊಳ್ಳಲು ವಿಫಲವಾಯಿತು.
2020ರಲ್ಲಿ ಟಿಟಿಡಿ ಅಧಿಕಾರಿಗಳು ಮೊದಲು ತುಪ್ಪದ ಟೆಂಡರ್ ನಿಯಮ ಬಿಗಿಗೊಳಿಸಿದರು. ನಂತರ ಯಾವುದೇ ಸ್ಪಷ್ಟನೆ ನೀಡದೇ ಕೇವಲ ಐದೇ ತಿಂಗಳಿನಲ್ಲಿ ಟೆಂಡರ್ ನಿಯಮ ಸಡಿಲಗೊಳಿಸಿದ್ದರು ಎಂದು ಹೇಳಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…