ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಗುಜರಾತ್ ಮೂಲದ ಜಾನುವಾರು ಹಾಗೂ ಆಹಾರ ಕುರಿತ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿರುವ ಟಿಡಿಪಿ ಪಕ್ಷದ ವಕ್ತಾರ ಅನಂ ವೆಂಕಟರಮಣ ರೆಡ್ಡಿ, ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರ ಅವಧಿಯಲ್ಲಿ ತಿರುಪತಿ ಪ್ರಸಾದ ತಯಾರಿಕೆಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಟೀಕಿಸಿದ್ದಾರೆ. ಸದ್ಯ ಈ ಆರೋಪ ಆಂಧ್ರ ಪ್ರದೇಶದಲಿ ಸಂಚಲನ ಸೃಷ್ಟಿಮಾಡಿದೆ.
ಲಾಡುವಿನ ತಯಾರಿಕೆಯಲ್ಲಿ ಬಳಕೆಯಾದ ತುಪ್ಪದ ಮಾದರಿಯ ದನ ಹಾಗೂ ಹಂದಿ ಕೊಬ್ಬು, ಮೀನಿನ ಎಣ್ಣೆಯ ಮಾದರಿಗಳು ಪತ್ತೆಯಾಗಿವೆ. ಈ ಮಾದರಿಯನ್ನು 2024ರ ಜುಲೈ 9 ರಂದು ಸಂಗ್ರಹಿಸಲಾಗಿದೆ. ಜುಲೈ 16 ರಂದು ಪ್ರಯೋಗಾಲಯ ತನ್ನ ವರದಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಆದರೆ, ಪ್ರಯೋಗಾಲಯದ ವರದಿಯನ್ನು ಆಂಧ್ರ ಪ್ರದೇಶದ ಸರ್ಕಾರವಾಗಲೀ ಅಥವಾ ವೆಂಕಟೇಶ್ವರ ಸ್ವಾಮಿ ದೇಗುಲವಾಗಲಿ ಖಾತ್ರಿಪಡಿಸಿಲ್ಲ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…