ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಗುಜರಾತ್ ಮೂಲದ ಜಾನುವಾರು ಹಾಗೂ ಆಹಾರ ಕುರಿತ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿರುವ ಟಿಡಿಪಿ ಪಕ್ಷದ ವಕ್ತಾರ ಅನಂ ವೆಂಕಟರಮಣ ರೆಡ್ಡಿ, ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರ ಅವಧಿಯಲ್ಲಿ ತಿರುಪತಿ ಪ್ರಸಾದ ತಯಾರಿಕೆಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಟೀಕಿಸಿದ್ದಾರೆ. ಸದ್ಯ ಈ ಆರೋಪ ಆಂಧ್ರ ಪ್ರದೇಶದಲಿ ಸಂಚಲನ ಸೃಷ್ಟಿಮಾಡಿದೆ.
ಲಾಡುವಿನ ತಯಾರಿಕೆಯಲ್ಲಿ ಬಳಕೆಯಾದ ತುಪ್ಪದ ಮಾದರಿಯ ದನ ಹಾಗೂ ಹಂದಿ ಕೊಬ್ಬು, ಮೀನಿನ ಎಣ್ಣೆಯ ಮಾದರಿಗಳು ಪತ್ತೆಯಾಗಿವೆ. ಈ ಮಾದರಿಯನ್ನು 2024ರ ಜುಲೈ 9 ರಂದು ಸಂಗ್ರಹಿಸಲಾಗಿದೆ. ಜುಲೈ 16 ರಂದು ಪ್ರಯೋಗಾಲಯ ತನ್ನ ವರದಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಆದರೆ, ಪ್ರಯೋಗಾಲಯದ ವರದಿಯನ್ನು ಆಂಧ್ರ ಪ್ರದೇಶದ ಸರ್ಕಾರವಾಗಲೀ ಅಥವಾ ವೆಂಕಟೇಶ್ವರ ಸ್ವಾಮಿ ದೇಗುಲವಾಗಲಿ ಖಾತ್ರಿಪಡಿಸಿಲ್ಲ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…