ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಈ ದುರಂತ ಸಂಭವಿಸಿದೆ.
ದುರಂತ ನಡೆದ ಸ್ಥಳದಲ್ಲಿ ಚೆನ್ನೈ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಭಾರೀ ಮಳೆಯಿಂದ ಅಡಚಣೆಯಾಗಿದ್ದು, ಎರಡನೇ ಭೂಕುಸಿತ ಸ್ಥಳೀಯ ದೇವಸ್ಥಾನದ ಬಳಿಯ ಸ್ಥಳದಲ್ಲಿ ಸಂಭವಿಸಿದೆ.
ಇನ್ನು ಘೋರ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಾರೀ ಗಾತ್ರದಲ್ಲಿ ಗುಡ್ಡ ಕುಸಿತ ಉಂಟಾಗಿರುವ ಕಾರಣ ಹಾಗೂ ಪದೇ ಪದೇ ಮಳೆ ಬರುತ್ತಿರುವ ಕಾರಣ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ.
ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…