ಹೊಸದಿಲ್ಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಯಿತು. ನಮ್ಮ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಪಿಯುಷ್ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಹೇಳಿದ್ದಾರೆ.
ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ₹320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ₹265 ಇದೆ. ಕಡಿಮೆ ಬೆಳೆಯಿಂದಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿಅನಾವಿ ಮಾಡಲಾಗಿದೆ ಎಂದು ನಿಖಿಲ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ಹೇಳಿದ್ದಾರೆ.
ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು ಹಾಗೂ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.
ಇದಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗವು, ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…