ದೇಶ- ವಿದೇಶ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂಬಾಕು; ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ಹೊಸದಿಲ್ಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು  ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಯಿತು. ನಮ್ಮ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ‌ ಪಿಯುಷ್ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್‌ ಹೇಳಿದ್ದಾರೆ.

ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ₹320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ₹265 ಇದೆ. ಕಡಿಮೆ ಬೆಳೆಯಿಂದಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿಅನಾವಿ ಮಾಡಲಾಗಿದೆ ಎಂದು ನಿಖಿಲ್  ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು  ಹೇಳಿದ್ದಾರೆ.

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು ಹಾಗೂ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.

ಇದಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗವು, ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago