ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಷ್ಟ್ರ ರಾಜಧಾನಿಯ ಚುನಾವಣಾ ಕಣದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿವೆ.
ನೀರು, ಕರೆಂಟ್ ಫ್ರೀ ಕೊಟ್ಟಿದ್ದ ಆಪ್ ಇನ್ನೊಂದು ಹೆಜ್ಜೆ ಮುಂದೆ ಹೋದರೆ, ಕಾಂಗ್ರೆಸ್ ಕರ್ನಾಟಕದ ಯೋಜನೆಗಳನ್ನೇ ಚೂರು ಬದಲಿಸಿ ಪ್ರಕಟಿಸಿದೆ.
ಇನ್ನೂ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಾ ಬಂದಿದ್ದ ಬಿಜೆಪಿ ಕೂಡ ಈ ಬಾರಿ ಗ್ಯಾರಂಟಿ ಅಸ್ತ್ರದೊಂದಿಗೆ ಚುನಾವಣಾ ಅಖಾಡಕ್ಕೆ ಇಳಿದಿದೆ.
ಒಟ್ಟಿನಲ್ಲಿ ಈ ಬಾರಿ ದೆಹಲಿ ಚುನಾವಣಾ ಕಣ ಗ್ಯಾರಂಟಿಗಳಿಂದಲೇ ಸದ್ದು ಮಾಡುತ್ತಿದ್ದು, ಇಂದು ಮಧ್ಯಾಹ್ನ 12ರ ವೇಳೆಗೆ ದೆಹಲಿ ಗದ್ದುಗೆ ಹಿಡಿಯುವವರು ಯಾರು ಎಂದು ಗೊತ್ತಾಗಲಿದೆ.
ಇನ್ನು ಎಲ್ಲಾ ಸಮೀಕ್ಷೆಗಳು ಈ ಬಾರಿ ಬಿಜೆಪಿ ದೆಹಲಿ ಗದ್ದುಗೆ ಹಿಡಿಯಲಿದೆ ಎಂದು ಹೇಳಿದ್ದು, ಅರವಿಂದ್ ಕೇಜ್ರಿವಾಲ್ಗೆ ಆತಂಕ ಎದುರಾಗಿದೆ ಎನ್ನಲಾಗುತ್ತಿದೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…