ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ, ಒಂದು ರಾಷ್ಟ್ರ, ಒಂದೇ ಚುನಾವಣೆಗೆ ಸಂಬಂಧಿತ ಎರಡು ಪ್ರತ್ಯೇಕ ಮಸೂದೆಗಳನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಿದೆ.
ಕೇಂದ್ರ ಕಾನೂನು ಸಚಿವ ಅರುಣ್ ರಾಮ್ ಮೇಘವಾಲ್ ಅವರು ಸಂವಿಧಾನ ಮಸೂದೆ ಹಾಗೂ ಕೇಂದ್ರ ಪ್ರಾಂತ್ಯವಾರು ಕಾಯ್ದೆಗಳು ಮಸೂದೆಯನ್ನು ಮಂಡಿಸಲಿದ್ದಾರೆ.
ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಮಸೂದೆಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ವಿಧೇಯಕವನ್ನು ವಿರೋಧಿಸುತ್ತಿವೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…