union cabinet meeeting tomorrow
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದ್ದು, ಎಲ್ಲರ ಚಿತ್ತ ಕೇಂದ್ರ ಸಚಿವ ಸಂಪುಟ ಸಭೆಯತ್ತ ನೆಟ್ಟಿದೆ.
ಏಪ್ರಿಲ್.22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಗುಂಡಿನ ದಾಳಿಗೆ 26 ಮಂದಿ ಸಾವನ್ನಪ್ಪಿದ್ದರು.
ಇದನ್ನೂ ಓದಿ:- ಪಹಲ್ಗಾಮ್ ದಾಳಿ ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಇದಾದ ಬಳಿಕ ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್.23ರಂದು ಭದ್ರತೆ ಕುರಿತ ಸಂಪುಟ ಸಭೆ ನಡೆದಿತ್ತು. ಸಭೆಯಲ್ಲಿ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ, ಪಾಕ್ ವಿರುದ್ಧ ಹಲವು ಕ್ರಮ ಕೈಗೊಳ್ಳಲಾಗಿತ್ತು.
ಇದೀಗ ನಾಳೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಪಾಕ್ ವಿರುದ್ಧ ಭಾರತ ಯುದ್ಧ ಘೋಷಣೆ ಮಾಡುತ್ತಾ? ಇಲ್ಲಾ ಶಾಂತಿ ಒಪ್ಪಂದದ ಮೂಲಕ ಯುದ್ಧ ಆಗುವುದನ್ನು ತಪ್ಪಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…