ದೇಶ- ವಿದೇಶ

ನಾಳೆ ದೆಹಲಿ ವಿಧಾನಸಭಾ ಚುನಾವಣೆ: ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ನವದೆಹಲಿ: ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರ ಬರೆಯಲಿದ್ದಾನೆ.

ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದ್ದು, ದೆಹಲಿಯ 1 ಕೋಟಿ 55 ಲಕ್ಷ ಮತದಾರರು ದೆಹಲಿಯ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿವೆ, ಪೊಲೀಸ್ ಮತ್ತು ಭದ್ರತಾ ಪಡೆಗಳ ನಿಯೋಜನೆ ಪ್ರಾರಂಭವಾಗಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.

ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಒಟ್ಟು 1.56 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಕಣದಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈಗಾಗಲೇ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಂಡಿದೆ. ನಾಳೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ಸಂಜೆಯೇ ಮತಗಟ್ಟೆಗಳಿಗೆ ತಲುಪಿದ್ದಾರೆ.

ದೆಹಲಿಯಲ್ಲಿ ಮತದಾನದ ಸಮಯದಲ್ಲಿ 35 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇಡೀ ಪ್ರಕ್ರಿಯೆಯಲ್ಲಿ ಕೇಂದ್ರ ಮೀಸಲು ಪಡೆಗಳ 220 ಕಂಪನಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಚುನಾವಣೆಯ ಸಮಯದಲ್ಲಿ 19 ಸಾವಿರ ಗೃಹರಕ್ಷಕ ದಳದ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ.

ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯ 70 ಸ್ಥಾನಗಳಿಗೆ ಒಟ್ಟು 1.56 ಕೋಟಿ ಮತದಾರರಿದ್ದಾರೆ. 13,766 ಮತಗಟ್ಟೆಗಳಲ್ಲಿ 83.76 ಲಕ್ಷ ಪುರುಷರು, 72.36 ಲಕ್ಷ ಮಹಿಳೆಯರು ಮತ್ತು 1,267 ತೃತೀಯ ಲಿಂಗ ಮತದಾರರು ಮತ ಚಲಾಯಿಸಲಿದ್ದಾರೆ. ಇದರೊಂದಿಗೆ, ಅಂಗವಿಕಲ ಮತದಾರರಿಗಾಗಿ 733 ಮತಗಟ್ಟೆಗಳನ್ನು ರಚಿಸಲಾಗಿದೆ. ಈ ಬಾರಿ ದೆಹಲಿಯಲ್ಲಿ ಗರಿಷ್ಠ ಮತದಾನವನ್ನು ಖಚಿತಪಡಿಸಿಕೊಳ್ಳಲು, ಚುನಾವಣಾ ಆಯೋಗವು ಜನರ ಅನುಕೂಲಕ್ಕಾಗಿ ವಿಶೇಷ ಕಾಳಜಿ ವಹಿಸಿದೆ. ಚುನಾವಣಾ ಆಯೋಗವು ಕ್ಯೂ ಮ್ಯಾನೇಜ್ಮೆಂಟ್ ಸಿಸ್ಟಮ್ ಆಪ್ ಅನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಮತದಾರರು ತಮ್ಮ ಮತಗಟ್ಟೆಯಲ್ಲಿ ಎಷ್ಟು ಜನಸಂದಣಿ ಇದೆ ಎಂಬುದನ್ನು ತಿಳಿದುಕೊಳ್ಳಬಹುದು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

2 hours ago

ಅಭಿವೃದ್ಧಿಯತ್ತ ಕೊಡಗಿನ ಸರ್ಕಾರಿ ಗೋಶಾಲೆ

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …

2 hours ago

60 ದಿನಗಳಲ್ಲಿ ಕಲ್ಲಂಗಡಿ ಬೆಳೆದು ಲಾಭ ಗಳಿಸಿದ ರೈತ

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…

2 hours ago

108 ವರ್ಷಗಳ ಶಾಲೆಯಲ್ಲಿ ನೂರಾರು ಮಕ್ಕಳ ಕಲರವ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…

2 hours ago

ಮೈಸೂರು ಜಿಲ್ಲೆಗೆ 13 ನಮ್ಮ ಕ್ಲಿನಿಕ್ ಮಂಜೂರು

ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…

2 hours ago