ದೇಶ- ವಿದೇಶ

ನಾಳೆ ದೆಹಲಿ ವಿಧಾನಸಭಾ ಚುನಾವಣೆ: ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ನವದೆಹಲಿ: ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರ ಬರೆಯಲಿದ್ದಾನೆ.

ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದ್ದು, ದೆಹಲಿಯ 1 ಕೋಟಿ 55 ಲಕ್ಷ ಮತದಾರರು ದೆಹಲಿಯ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿವೆ, ಪೊಲೀಸ್ ಮತ್ತು ಭದ್ರತಾ ಪಡೆಗಳ ನಿಯೋಜನೆ ಪ್ರಾರಂಭವಾಗಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.

ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಒಟ್ಟು 1.56 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಕಣದಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈಗಾಗಲೇ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಂಡಿದೆ. ನಾಳೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ಸಂಜೆಯೇ ಮತಗಟ್ಟೆಗಳಿಗೆ ತಲುಪಿದ್ದಾರೆ.

ದೆಹಲಿಯಲ್ಲಿ ಮತದಾನದ ಸಮಯದಲ್ಲಿ 35 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇಡೀ ಪ್ರಕ್ರಿಯೆಯಲ್ಲಿ ಕೇಂದ್ರ ಮೀಸಲು ಪಡೆಗಳ 220 ಕಂಪನಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಚುನಾವಣೆಯ ಸಮಯದಲ್ಲಿ 19 ಸಾವಿರ ಗೃಹರಕ್ಷಕ ದಳದ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ.

ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯ 70 ಸ್ಥಾನಗಳಿಗೆ ಒಟ್ಟು 1.56 ಕೋಟಿ ಮತದಾರರಿದ್ದಾರೆ. 13,766 ಮತಗಟ್ಟೆಗಳಲ್ಲಿ 83.76 ಲಕ್ಷ ಪುರುಷರು, 72.36 ಲಕ್ಷ ಮಹಿಳೆಯರು ಮತ್ತು 1,267 ತೃತೀಯ ಲಿಂಗ ಮತದಾರರು ಮತ ಚಲಾಯಿಸಲಿದ್ದಾರೆ. ಇದರೊಂದಿಗೆ, ಅಂಗವಿಕಲ ಮತದಾರರಿಗಾಗಿ 733 ಮತಗಟ್ಟೆಗಳನ್ನು ರಚಿಸಲಾಗಿದೆ. ಈ ಬಾರಿ ದೆಹಲಿಯಲ್ಲಿ ಗರಿಷ್ಠ ಮತದಾನವನ್ನು ಖಚಿತಪಡಿಸಿಕೊಳ್ಳಲು, ಚುನಾವಣಾ ಆಯೋಗವು ಜನರ ಅನುಕೂಲಕ್ಕಾಗಿ ವಿಶೇಷ ಕಾಳಜಿ ವಹಿಸಿದೆ. ಚುನಾವಣಾ ಆಯೋಗವು ಕ್ಯೂ ಮ್ಯಾನೇಜ್ಮೆಂಟ್ ಸಿಸ್ಟಮ್ ಆಪ್ ಅನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಮತದಾರರು ತಮ್ಮ ಮತಗಟ್ಟೆಯಲ್ಲಿ ಎಷ್ಟು ಜನಸಂದಣಿ ಇದೆ ಎಂಬುದನ್ನು ತಿಳಿದುಕೊಳ್ಳಬಹುದು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮನ್‌ಮುಲ್ ಅಧ್ಯಕ್ಷರಾಗಿ ಹರೀಶ್‌ಬಾಬು ಆಯ್ಕೆ ಬಹುತೇಕ ಖಚಿತ

ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ  ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…

2 mins ago

ಅಂದು ಮಿನಿ ವಿಧಾನಸೌಧ, ಇಂದು ಪ್ರಮೋದಾ ದೇವಿ ಒಡೆಯರ ಆಸ್ತಿ?

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…

6 mins ago

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

21 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

21 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

21 hours ago