ದೇಶ- ವಿದೇಶ

ನಾಳೆ ಬೆಳಿಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್‌

ಶ್ರೀಹರಿಕೋಟಾ: ಇಸ್ರೋ PSLC-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ.

ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ ನಿಗದಿಯಾಗಿದ್ದು, ಈ ಕುರಿತು ಇಸ್ರೋದ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಇದರ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಇಸ್ರೋ ಅಧ್ಯಕ್ಷ ವಿ.ನಾರಾಯಣನ್‌ ತಿರುಪತಿ ತಿಮ್ಮಪ್ಪನ ಮೊರೆ ಹೋದರು. ದೂರ ಸಂವೇದಿ ಉಪಗ್ರಹ ಮಿಷನ್‌ ಆದ ಪೋಲಾರ್‌ ಸ್ಯಾಟ್‌ಲೈಟ್‌ ಲಾಂಚ್‌ ವೆಹಿಕಲ್‌ ಯಶಸ್ವಿ ಉಡಾವಣೆಗೆ ಅವರು ದೇವರ ಆಶೀರ್ವಾದ ಕೋರಿದರು.

ಪಿಎಸ್‌ಎಲ್‌ವಿ-ಸಿ61 ಮೂಲಕ ಉಡಾವಣೆಯಾಗುವ 101ನೇ ಮಿಷನ್‌ ಇಡ್ರೋಗೆ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಭಾರತದ ಎಲ್ಲಾ ಹವಾಮಾನ ಭೂ ವೀಕ್ಷಣಾ ಸಾಮರ್ಥ್ಯ ಹೊಂದಿರುವ ಈ ಉಪಗ್ರಹವು ಬಾಹ್ಯಾಕಾಶ ಸಾಧನೆಗೆ ದೇಶದ ಬದ್ಧತೆಯನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಇಸ್ರೋ ಅಧ್ಯಕ್ಷ ನಾರಾಯಣನ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

6 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

7 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 hours ago