ISROs 101st rocket
ಶ್ರೀಹರಿಕೋಟಾ: ಇಸ್ರೋ PSLC-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ.
ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ ನಿಗದಿಯಾಗಿದ್ದು, ಈ ಕುರಿತು ಇಸ್ರೋದ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಇದರ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ತಿರುಪತಿ ತಿಮ್ಮಪ್ಪನ ಮೊರೆ ಹೋದರು. ದೂರ ಸಂವೇದಿ ಉಪಗ್ರಹ ಮಿಷನ್ ಆದ ಪೋಲಾರ್ ಸ್ಯಾಟ್ಲೈಟ್ ಲಾಂಚ್ ವೆಹಿಕಲ್ ಯಶಸ್ವಿ ಉಡಾವಣೆಗೆ ಅವರು ದೇವರ ಆಶೀರ್ವಾದ ಕೋರಿದರು.
ಪಿಎಸ್ಎಲ್ವಿ-ಸಿ61 ಮೂಲಕ ಉಡಾವಣೆಯಾಗುವ 101ನೇ ಮಿಷನ್ ಇಡ್ರೋಗೆ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಭಾರತದ ಎಲ್ಲಾ ಹವಾಮಾನ ಭೂ ವೀಕ್ಷಣಾ ಸಾಮರ್ಥ್ಯ ಹೊಂದಿರುವ ಈ ಉಪಗ್ರಹವು ಬಾಹ್ಯಾಕಾಶ ಸಾಧನೆಗೆ ದೇಶದ ಬದ್ಧತೆಯನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಇಸ್ರೋ ಅಧ್ಯಕ್ಷ ನಾರಾಯಣನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…