ನವದೆಹಲಿ: ಇಲ್ಲಿನ ಚಾಣಕ್ಯಪುರಿ ಪ್ರದೇಶದಲ್ಲಿ 138 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಉದ್ಘಾಟನೆ ಮಾಡಲಿದ್ದಾರೆ.
ನಾಳೆ ಸಂಜೆ 6.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ ವಹಿಸಲಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಜರಿರಲಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರನ್ನು ಸಹ ಆಹ್ವಾನಿಸಲಾಗಿದೆ.
ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್ ಅವರನ್ನು ಸಹ ಆಹ್ವಾನಿಸಲಾಗಿದೆ.
51 ವರ್ಷಕ್ಕೂ ಹಳೆಯದಾದ ಮೂರು ಅಂತಸ್ತಿನ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಅಂದಾಜು 82 ಕೋಟಿ ರೂ ವೆಚ್ಚದಲ್ಲಿ ಐದು ಅಂತಸ್ತಿನ ನೂತನ ಕಟ್ಟಡ ಕಟ್ಟುವುದಕ್ಕೆ ಕರ್ನಾಟಕ ಸರ್ಕಾರ 2019ರಲ್ಲಿ ಅನುಮೋದನೆ ನೀಡಿತ್ತು. ಆಗ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದರು. ಇದೀಗ ಕಟ್ಟಡ ನಿರ್ಮಾಣದ ವೆಚ್ಚ 140 ಕೋಟಿ ರೂಗೆ ಏರಿಕೆಯಾಗಿದೆ.
ಈ ಕಟ್ಟಡವು 3532 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಒಟ್ಟು 12,212 ಚದರ ಮೀಟರ್ ನಿರ್ಮಾಣ ಪ್ರದೇಶವನ್ನು ಒಳಗೊಂಡಿರುವ ಈ ಭವನವು 2ಬಿ+ಜಿ+6ಯು ರಚನೆಯಲ್ಲಿ 9 ಅಂತಸ್ತುಗಳನ್ನು ಹೊಂದಿದೆ.
ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.…
ದೇವನಹಳ್ಳಿ : ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕ. ದೇಶದ ಸಾರ್ವಭೌಮತೆಗೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ…
ಮೈಸೂರು: ಪಹಲ್ಗಾಮ್ ಘಟನೆ ಕರುಣೆಯಿಲ್ಲದ ಕೃತ್ಯ ಎಂದು ವಿಶ್ವಮೈತ್ರಿ ಬುದ್ದವಿಹಾರದ ಪೂಜ್ಯ ಡಾ. ಕಲ್ಯಾಣಸಿರಿ ಭಂತೇಜಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ…
ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ…
ಹನೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ೮ ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎಲ್ಲೇಮಾಳ…
ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಪಾಕಿಸ್ತಾನದ ಮೇಲೆ ಯುದ್ದ…