ದೇಶ- ವಿದೇಶ

ನಾಳೆಯಿಂದ ಸಂಸತ್‌ ಬಜೆಟ್‌ ಅಧಿವೇಶನ

ನವದೆಹಲಿ: ನಾಳೆಯಿಂದ ಸಂಸತ್‌ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್.‌12ರವರೆಗೆ ನಡೆಯಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ.23ರಂದು ಕೇಂದ್ರ ಸರ್ಕಾರದ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದ್ದಾರೆ.

ನಾಳೆ ಅಧಿವೇಶನದ ಮೊದಲ ದಿನವಾಗಿದ್ದು, ನಿರ್ಮಲಾ ಸೀತಾರಾಮನ್‌ ಆರ್ಥಿಕ ಸಮೀಕ್ಷಾ ವರದಿಯನ್ನು ಮಂಡಿಸಲಿದ್ದಾರೆ. ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಒಟ್ಟು 6 ಮಸೂದೆಗಳನ್ನು ಮಂಡಿಸಲು ಸಿದ್ಧತೆ ಮಾಡಿಕೊಂಡಿದೆ.

ಮಂಗಳವಾರ ಕೇಂದ್ರ ಸರ್ಕಾರದ ಪೂರ್ಣ ಬಜೆಟ್‌ ಮಂಡನೆ ಆಗಲಿದ್ದು, ರೈತರಿಗೆ ಸಿಗುವ ಕಿಸಾನ್‌ ಸಮ್ಮಾನ್‌ ಯೋಜನೆಯ ಹಣ ಹೆಚ್ಚುವರಿಯಾಗಲಿದೆ ಎನ್ನಲಾಗಿದೆ. ಇದರ ಜೊತೆಗೆ ಮಹಿಳೆಯರು, ಕಾರ್ಮಿಕರು ಸೇರಿದಂತೆ ಅನೇಕ ಮಧ್ಯಮ ವರ್ಗದ ಜನತೆಗೆ ಬಜೆಟ್‌ನಲ್ಲಿ ಬಂಪರ್‌ ಆಫರ್‌ ಘೋಷಣೆಯಾಗಲಿದೆ ಎನ್ನಲಾಗಿದ್ದು, ಈಗ ಎಲ್ಲರ ಚಿತ್ತ ಕೇಂದ್ರ ಸರ್ಕಾರದ ಬಜೆಟ್‌ನತ್ತ ನೆಟ್ಟಿದೆ.

ಬಜೆಟ್‌ ಮಂಡಿಸಿದ ಬಳಿಕ ಬಜೆಟ್‌ ವಿರುದ್ಧ ವಿಪಕ್ಷಗಳು ಕಿಡಿಕಾರುವ ಸಂಭವವಿದ್ದು, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಈ ಅಧಿವೇಶನದಲ್ಲಿ ಏನೆಲ್ಲಾ ಚರ್ಚೆ ಮಾಡಲು ಸಜ್ಜಾಗಿದ್ದಾರೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

5 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

5 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago