ಪುರಿ: ದೇಗುಲಗಳ ಸಪ್ತ ಸಂಪತ್ತಿನ ಸುತ್ತ ಸುತ್ತಿಕೊಂಡಿರುವ ಹಾವುಗಳ ಚರ್ಚೆ ಹಿಂದೂ ಮತ್ತು ಬೌದ್ಧ ಸಂಪ್ರದಾಯಗಳಲ್ಲಿ ಬಹಳ ಹಿಂದಿನಿಂದಲೂ ಸಾಮಾನ್ಯವಾಗಿದೆ. ಪೌರಾಣಿಕ ಕಥೆಗಳು ಮತ್ತು ಅನೇಕ ಚಲನಚಿತ್ರಗಳು ಕೂಡ ಅಂತಹ ನಿದರ್ಶನಗಳಿಂದ ತುಂಬಿವೆ. ಅದಕ್ಕೆ ಒಡಿಶಾದ ಪುರಿ ಜಗನ್ನಾಥ ದೇವಾಲಯ ಕೂಡ ಹೊರತಾಗಿಲ್ಲ. ಜಗನ್ನಾಥ ದೇವಾಲಯದ ರತ್ನ ಭಂಡಾರದ ಬಗ್ಗೆ ಹಲವು ಕಥೆಗಳಿವೆ.
ಭಗವಾನ್ ಜಗನ್ನಾಥ ಮತ್ತು ಪುರಿಯಲ್ಲಿರುವ ದೇವಾಲಯದ ಇತರೆ ದೇವತೆಗಳ ಬೆಲೆಬಾಳುವ ವಸ್ತುಗಳನ್ನು ಸರ್ಪಗಳ ಗುಂಪು ಬಹಳ ನಿಷ್ಠೆಯಿಂದ ಕಾಪಾಡುತ್ತವೆ ಎಂಬ ದಂತಕಥೆಯಿದೆ. 6 ವರ್ಷಗಳ ಹಿಂದೆ 2018ರಲ್ಲಿ ಒಡಿಶಾ ಹೈಕೋರ್ಟ್ನ ಆದೇಶದ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಜಂಟಿ ತಂಡ ಮತ್ತು ಪುರಿಯ ಜಗನ್ನಾಥ ದೇವಾಲಯದ ಅಧಿಕಾರಿಗಳು ಅದರ ರಚನಾತ್ಮಕ ಸ್ಥಿತಿಯನ್ನು ಪರಿಶೀಲಿಸಲು ರತ್ನ ಭಂಡಾರಕ್ಕೆ ತೆರಳಿದರು.
ಆ ದೇಗುಲದ ಹೊರಗೆ ಭಕ್ತರು ಮತ್ತು ರಕ್ಷಣಾ ಸಿಬ್ಬಂದಿಗಳ ಗುಂಪಿನೊಂದಿಗೆ ಭುವನೇಶ್ವರದಿಂದ ವಿಶೇಷವಾಗಿ ಕರೆಸಲ್ಪಟ್ಟ ಇಬ್ಬರು ಪರಿಣಿತ ಹಾವು ಹಿಡಿಯುವವರು ಕೂಡ ಸಹಾಯ ಮಾಡಲು ಸಿದ್ಧರಾಗಿ ನಿಂತರು. ಆದರೆ ಹಳೆಯ ಭಂಡಾರದಲ್ಲಿ ಬೀಗದ ಕೊರತೆಯಿದ್ದ ಪರಿಣಾಮ ಅದನ್ನು ತೆಗೆಯಲು ಆಗಲಿಲ್ಲ. ಈಗ ನಾಳೆ ಜಗನ್ನಾಥ ದೇವಾಲಯದ ರತ್ನ ಭಂಡಾರದ ಒಳಗಿನ ಕೋಣೆಯನ್ನು ತೆರೆಯಲಾಗುವುದು. ಇನ್ನೂ ಈ ದೇವಾಲಯದ ಸಮಿತಿಯು ಎಲ್ಲಾ ಗಾತ್ರದ ಸರೀಸೃಪಗಳಿಂದ ಬೆದರಿಕೆಗೆ ಹೆದರುತ್ತಿದೆ. ಹಾವಿನ ಭೀತಿಯ ಜೊತೆಗೆ ಶಾಪದ ಭೀತಿಯೂ ಅವರನ್ನು ಕಾಡುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…