ದೇಶ- ವಿದೇಶ

ನಾಳೆ ಬಯಲಾಗುತ್ತಾ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ..?

ಪುರಿ: ದೇಗುಲಗಳ ಸಪ್ತ ಸಂಪತ್ತಿನ ಸುತ್ತ ಸುತ್ತಿಕೊಂಡಿರುವ ಹಾವುಗಳ ಚರ್ಚೆ ಹಿಂದೂ ಮತ್ತು ಬೌದ್ಧ ಸಂಪ್ರದಾಯಗಳಲ್ಲಿ ಬಹಳ ಹಿಂದಿನಿಂದಲೂ ಸಾಮಾನ್ಯವಾಗಿದೆ. ಪೌರಾಣಿಕ ಕಥೆಗಳು ಮತ್ತು ಅನೇಕ ಚಲನಚಿತ್ರಗಳು ಕೂಡ ಅಂತಹ ನಿದರ್ಶನಗಳಿಂದ ತುಂಬಿವೆ. ಅದಕ್ಕೆ ಒಡಿಶಾದ ಪುರಿ ಜಗನ್ನಾಥ ದೇವಾಲಯ ಕೂಡ ಹೊರತಾಗಿಲ್ಲ. ಜಗನ್ನಾಥ ದೇವಾಲಯದ ರತ್ನ ಭಂಡಾರದ ಬಗ್ಗೆ ಹಲವು ಕಥೆಗಳಿವೆ.

ಭಗವಾನ್‌ ಜಗನ್ನಾಥ ಮತ್ತು ಪುರಿಯಲ್ಲಿರುವ ದೇವಾಲಯದ ಇತರೆ ದೇವತೆಗಳ ಬೆಲೆಬಾಳುವ ವಸ್ತುಗಳನ್ನು ಸರ್ಪಗಳ ಗುಂಪು ಬಹಳ ನಿಷ್ಠೆಯಿಂದ ಕಾಪಾಡುತ್ತವೆ ಎಂಬ ದಂತಕಥೆಯಿದೆ. 6 ವರ್ಷಗಳ ಹಿಂದೆ 2018ರಲ್ಲಿ ಒಡಿಶಾ ಹೈಕೋರ್ಟ್‌ನ ಆದೇಶದ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಜಂಟಿ ತಂಡ ಮತ್ತು ಪುರಿಯ ಜಗನ್ನಾಥ ದೇವಾಲಯದ ಅಧಿಕಾರಿಗಳು ಅದರ ರಚನಾತ್ಮಕ ಸ್ಥಿತಿಯನ್ನು ಪರಿಶೀಲಿಸಲು ರತ್ನ ಭಂಡಾರಕ್ಕೆ ತೆರಳಿದರು.

ಆ ದೇಗುಲದ ಹೊರಗೆ ಭಕ್ತರು ಮತ್ತು ರಕ್ಷಣಾ ಸಿಬ್ಬಂದಿಗಳ ಗುಂಪಿನೊಂದಿಗೆ ಭುವನೇಶ್ವರದಿಂದ ವಿಶೇಷವಾಗಿ ಕರೆಸಲ್ಪಟ್ಟ ಇಬ್ಬರು ಪರಿಣಿತ ಹಾವು ಹಿಡಿಯುವವರು ಕೂಡ ಸಹಾಯ ಮಾಡಲು ಸಿದ್ಧರಾಗಿ ನಿಂತರು. ಆದರೆ ಹಳೆಯ ಭಂಡಾರದಲ್ಲಿ ಬೀಗದ ಕೊರತೆಯಿದ್ದ ಪರಿಣಾಮ ಅದನ್ನು ತೆಗೆಯಲು ಆಗಲಿಲ್ಲ. ಈಗ ನಾಳೆ ಜಗನ್ನಾಥ ದೇವಾಲಯದ ರತ್ನ ಭಂಡಾರದ ಒಳಗಿನ ಕೋಣೆಯನ್ನು ತೆರೆಯಲಾಗುವುದು. ಇನ್ನೂ ಈ ದೇವಾಲಯದ ಸಮಿತಿಯು ಎಲ್ಲಾ ಗಾತ್ರದ ಸರೀಸೃಪಗಳಿಂದ ಬೆದರಿಕೆಗೆ ಹೆದರುತ್ತಿದೆ. ಹಾವಿನ ಭೀತಿಯ ಜೊತೆಗೆ ಶಾಪದ ಭೀತಿಯೂ ಅವರನ್ನು ಕಾಡುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

25 mins ago

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…

32 mins ago

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

1 hour ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

2 hours ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

2 hours ago