ದೇಶ- ವಿದೇಶ

ನಾಳೆ ಬಯಲಾಗುತ್ತಾ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ..?

ಪುರಿ: ದೇಗುಲಗಳ ಸಪ್ತ ಸಂಪತ್ತಿನ ಸುತ್ತ ಸುತ್ತಿಕೊಂಡಿರುವ ಹಾವುಗಳ ಚರ್ಚೆ ಹಿಂದೂ ಮತ್ತು ಬೌದ್ಧ ಸಂಪ್ರದಾಯಗಳಲ್ಲಿ ಬಹಳ ಹಿಂದಿನಿಂದಲೂ ಸಾಮಾನ್ಯವಾಗಿದೆ. ಪೌರಾಣಿಕ ಕಥೆಗಳು ಮತ್ತು ಅನೇಕ ಚಲನಚಿತ್ರಗಳು ಕೂಡ ಅಂತಹ ನಿದರ್ಶನಗಳಿಂದ ತುಂಬಿವೆ. ಅದಕ್ಕೆ ಒಡಿಶಾದ ಪುರಿ ಜಗನ್ನಾಥ ದೇವಾಲಯ ಕೂಡ ಹೊರತಾಗಿಲ್ಲ. ಜಗನ್ನಾಥ ದೇವಾಲಯದ ರತ್ನ ಭಂಡಾರದ ಬಗ್ಗೆ ಹಲವು ಕಥೆಗಳಿವೆ.

ಭಗವಾನ್‌ ಜಗನ್ನಾಥ ಮತ್ತು ಪುರಿಯಲ್ಲಿರುವ ದೇವಾಲಯದ ಇತರೆ ದೇವತೆಗಳ ಬೆಲೆಬಾಳುವ ವಸ್ತುಗಳನ್ನು ಸರ್ಪಗಳ ಗುಂಪು ಬಹಳ ನಿಷ್ಠೆಯಿಂದ ಕಾಪಾಡುತ್ತವೆ ಎಂಬ ದಂತಕಥೆಯಿದೆ. 6 ವರ್ಷಗಳ ಹಿಂದೆ 2018ರಲ್ಲಿ ಒಡಿಶಾ ಹೈಕೋರ್ಟ್‌ನ ಆದೇಶದ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಜಂಟಿ ತಂಡ ಮತ್ತು ಪುರಿಯ ಜಗನ್ನಾಥ ದೇವಾಲಯದ ಅಧಿಕಾರಿಗಳು ಅದರ ರಚನಾತ್ಮಕ ಸ್ಥಿತಿಯನ್ನು ಪರಿಶೀಲಿಸಲು ರತ್ನ ಭಂಡಾರಕ್ಕೆ ತೆರಳಿದರು.

ಆ ದೇಗುಲದ ಹೊರಗೆ ಭಕ್ತರು ಮತ್ತು ರಕ್ಷಣಾ ಸಿಬ್ಬಂದಿಗಳ ಗುಂಪಿನೊಂದಿಗೆ ಭುವನೇಶ್ವರದಿಂದ ವಿಶೇಷವಾಗಿ ಕರೆಸಲ್ಪಟ್ಟ ಇಬ್ಬರು ಪರಿಣಿತ ಹಾವು ಹಿಡಿಯುವವರು ಕೂಡ ಸಹಾಯ ಮಾಡಲು ಸಿದ್ಧರಾಗಿ ನಿಂತರು. ಆದರೆ ಹಳೆಯ ಭಂಡಾರದಲ್ಲಿ ಬೀಗದ ಕೊರತೆಯಿದ್ದ ಪರಿಣಾಮ ಅದನ್ನು ತೆಗೆಯಲು ಆಗಲಿಲ್ಲ. ಈಗ ನಾಳೆ ಜಗನ್ನಾಥ ದೇವಾಲಯದ ರತ್ನ ಭಂಡಾರದ ಒಳಗಿನ ಕೋಣೆಯನ್ನು ತೆರೆಯಲಾಗುವುದು. ಇನ್ನೂ ಈ ದೇವಾಲಯದ ಸಮಿತಿಯು ಎಲ್ಲಾ ಗಾತ್ರದ ಸರೀಸೃಪಗಳಿಂದ ಬೆದರಿಕೆಗೆ ಹೆದರುತ್ತಿದೆ. ಹಾವಿನ ಭೀತಿಯ ಜೊತೆಗೆ ಶಾಪದ ಭೀತಿಯೂ ಅವರನ್ನು ಕಾಡುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago