ಪುರಿ: ದೇಗುಲಗಳ ಸಪ್ತ ಸಂಪತ್ತಿನ ಸುತ್ತ ಸುತ್ತಿಕೊಂಡಿರುವ ಹಾವುಗಳ ಚರ್ಚೆ ಹಿಂದೂ ಮತ್ತು ಬೌದ್ಧ ಸಂಪ್ರದಾಯಗಳಲ್ಲಿ ಬಹಳ ಹಿಂದಿನಿಂದಲೂ ಸಾಮಾನ್ಯವಾಗಿದೆ. ಪೌರಾಣಿಕ ಕಥೆಗಳು ಮತ್ತು ಅನೇಕ ಚಲನಚಿತ್ರಗಳು ಕೂಡ ಅಂತಹ ನಿದರ್ಶನಗಳಿಂದ ತುಂಬಿವೆ. ಅದಕ್ಕೆ ಒಡಿಶಾದ ಪುರಿ ಜಗನ್ನಾಥ ದೇವಾಲಯ ಕೂಡ ಹೊರತಾಗಿಲ್ಲ. ಜಗನ್ನಾಥ ದೇವಾಲಯದ ರತ್ನ ಭಂಡಾರದ ಬಗ್ಗೆ ಹಲವು ಕಥೆಗಳಿವೆ.
ಭಗವಾನ್ ಜಗನ್ನಾಥ ಮತ್ತು ಪುರಿಯಲ್ಲಿರುವ ದೇವಾಲಯದ ಇತರೆ ದೇವತೆಗಳ ಬೆಲೆಬಾಳುವ ವಸ್ತುಗಳನ್ನು ಸರ್ಪಗಳ ಗುಂಪು ಬಹಳ ನಿಷ್ಠೆಯಿಂದ ಕಾಪಾಡುತ್ತವೆ ಎಂಬ ದಂತಕಥೆಯಿದೆ. 6 ವರ್ಷಗಳ ಹಿಂದೆ 2018ರಲ್ಲಿ ಒಡಿಶಾ ಹೈಕೋರ್ಟ್ನ ಆದೇಶದ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಜಂಟಿ ತಂಡ ಮತ್ತು ಪುರಿಯ ಜಗನ್ನಾಥ ದೇವಾಲಯದ ಅಧಿಕಾರಿಗಳು ಅದರ ರಚನಾತ್ಮಕ ಸ್ಥಿತಿಯನ್ನು ಪರಿಶೀಲಿಸಲು ರತ್ನ ಭಂಡಾರಕ್ಕೆ ತೆರಳಿದರು.
ಆ ದೇಗುಲದ ಹೊರಗೆ ಭಕ್ತರು ಮತ್ತು ರಕ್ಷಣಾ ಸಿಬ್ಬಂದಿಗಳ ಗುಂಪಿನೊಂದಿಗೆ ಭುವನೇಶ್ವರದಿಂದ ವಿಶೇಷವಾಗಿ ಕರೆಸಲ್ಪಟ್ಟ ಇಬ್ಬರು ಪರಿಣಿತ ಹಾವು ಹಿಡಿಯುವವರು ಕೂಡ ಸಹಾಯ ಮಾಡಲು ಸಿದ್ಧರಾಗಿ ನಿಂತರು. ಆದರೆ ಹಳೆಯ ಭಂಡಾರದಲ್ಲಿ ಬೀಗದ ಕೊರತೆಯಿದ್ದ ಪರಿಣಾಮ ಅದನ್ನು ತೆಗೆಯಲು ಆಗಲಿಲ್ಲ. ಈಗ ನಾಳೆ ಜಗನ್ನಾಥ ದೇವಾಲಯದ ರತ್ನ ಭಂಡಾರದ ಒಳಗಿನ ಕೋಣೆಯನ್ನು ತೆರೆಯಲಾಗುವುದು. ಇನ್ನೂ ಈ ದೇವಾಲಯದ ಸಮಿತಿಯು ಎಲ್ಲಾ ಗಾತ್ರದ ಸರೀಸೃಪಗಳಿಂದ ಬೆದರಿಕೆಗೆ ಹೆದರುತ್ತಿದೆ. ಹಾವಿನ ಭೀತಿಯ ಜೊತೆಗೆ ಶಾಪದ ಭೀತಿಯೂ ಅವರನ್ನು ಕಾಡುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…