ದೇಶ- ವಿದೇಶ

ನಾಳೆ ಬಯಲಾಗುತ್ತಾ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ..?

ಪುರಿ: ದೇಗುಲಗಳ ಸಪ್ತ ಸಂಪತ್ತಿನ ಸುತ್ತ ಸುತ್ತಿಕೊಂಡಿರುವ ಹಾವುಗಳ ಚರ್ಚೆ ಹಿಂದೂ ಮತ್ತು ಬೌದ್ಧ ಸಂಪ್ರದಾಯಗಳಲ್ಲಿ ಬಹಳ ಹಿಂದಿನಿಂದಲೂ ಸಾಮಾನ್ಯವಾಗಿದೆ. ಪೌರಾಣಿಕ ಕಥೆಗಳು ಮತ್ತು ಅನೇಕ ಚಲನಚಿತ್ರಗಳು ಕೂಡ ಅಂತಹ ನಿದರ್ಶನಗಳಿಂದ ತುಂಬಿವೆ. ಅದಕ್ಕೆ ಒಡಿಶಾದ ಪುರಿ ಜಗನ್ನಾಥ ದೇವಾಲಯ ಕೂಡ ಹೊರತಾಗಿಲ್ಲ. ಜಗನ್ನಾಥ ದೇವಾಲಯದ ರತ್ನ ಭಂಡಾರದ ಬಗ್ಗೆ ಹಲವು ಕಥೆಗಳಿವೆ.

ಭಗವಾನ್‌ ಜಗನ್ನಾಥ ಮತ್ತು ಪುರಿಯಲ್ಲಿರುವ ದೇವಾಲಯದ ಇತರೆ ದೇವತೆಗಳ ಬೆಲೆಬಾಳುವ ವಸ್ತುಗಳನ್ನು ಸರ್ಪಗಳ ಗುಂಪು ಬಹಳ ನಿಷ್ಠೆಯಿಂದ ಕಾಪಾಡುತ್ತವೆ ಎಂಬ ದಂತಕಥೆಯಿದೆ. 6 ವರ್ಷಗಳ ಹಿಂದೆ 2018ರಲ್ಲಿ ಒಡಿಶಾ ಹೈಕೋರ್ಟ್‌ನ ಆದೇಶದ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಜಂಟಿ ತಂಡ ಮತ್ತು ಪುರಿಯ ಜಗನ್ನಾಥ ದೇವಾಲಯದ ಅಧಿಕಾರಿಗಳು ಅದರ ರಚನಾತ್ಮಕ ಸ್ಥಿತಿಯನ್ನು ಪರಿಶೀಲಿಸಲು ರತ್ನ ಭಂಡಾರಕ್ಕೆ ತೆರಳಿದರು.

ಆ ದೇಗುಲದ ಹೊರಗೆ ಭಕ್ತರು ಮತ್ತು ರಕ್ಷಣಾ ಸಿಬ್ಬಂದಿಗಳ ಗುಂಪಿನೊಂದಿಗೆ ಭುವನೇಶ್ವರದಿಂದ ವಿಶೇಷವಾಗಿ ಕರೆಸಲ್ಪಟ್ಟ ಇಬ್ಬರು ಪರಿಣಿತ ಹಾವು ಹಿಡಿಯುವವರು ಕೂಡ ಸಹಾಯ ಮಾಡಲು ಸಿದ್ಧರಾಗಿ ನಿಂತರು. ಆದರೆ ಹಳೆಯ ಭಂಡಾರದಲ್ಲಿ ಬೀಗದ ಕೊರತೆಯಿದ್ದ ಪರಿಣಾಮ ಅದನ್ನು ತೆಗೆಯಲು ಆಗಲಿಲ್ಲ. ಈಗ ನಾಳೆ ಜಗನ್ನಾಥ ದೇವಾಲಯದ ರತ್ನ ಭಂಡಾರದ ಒಳಗಿನ ಕೋಣೆಯನ್ನು ತೆರೆಯಲಾಗುವುದು. ಇನ್ನೂ ಈ ದೇವಾಲಯದ ಸಮಿತಿಯು ಎಲ್ಲಾ ಗಾತ್ರದ ಸರೀಸೃಪಗಳಿಂದ ಬೆದರಿಕೆಗೆ ಹೆದರುತ್ತಿದೆ. ಹಾವಿನ ಭೀತಿಯ ಜೊತೆಗೆ ಶಾಪದ ಭೀತಿಯೂ ಅವರನ್ನು ಕಾಡುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago