ದೇಶ- ವಿದೇಶ

ನಾಳೆ ಬಯಲಾಗುತ್ತಾ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ..?

ಪುರಿ: ದೇಗುಲಗಳ ಸಪ್ತ ಸಂಪತ್ತಿನ ಸುತ್ತ ಸುತ್ತಿಕೊಂಡಿರುವ ಹಾವುಗಳ ಚರ್ಚೆ ಹಿಂದೂ ಮತ್ತು ಬೌದ್ಧ ಸಂಪ್ರದಾಯಗಳಲ್ಲಿ ಬಹಳ ಹಿಂದಿನಿಂದಲೂ ಸಾಮಾನ್ಯವಾಗಿದೆ. ಪೌರಾಣಿಕ ಕಥೆಗಳು ಮತ್ತು ಅನೇಕ ಚಲನಚಿತ್ರಗಳು ಕೂಡ ಅಂತಹ ನಿದರ್ಶನಗಳಿಂದ ತುಂಬಿವೆ. ಅದಕ್ಕೆ ಒಡಿಶಾದ ಪುರಿ ಜಗನ್ನಾಥ ದೇವಾಲಯ ಕೂಡ ಹೊರತಾಗಿಲ್ಲ. ಜಗನ್ನಾಥ ದೇವಾಲಯದ ರತ್ನ ಭಂಡಾರದ ಬಗ್ಗೆ ಹಲವು ಕಥೆಗಳಿವೆ.

ಭಗವಾನ್‌ ಜಗನ್ನಾಥ ಮತ್ತು ಪುರಿಯಲ್ಲಿರುವ ದೇವಾಲಯದ ಇತರೆ ದೇವತೆಗಳ ಬೆಲೆಬಾಳುವ ವಸ್ತುಗಳನ್ನು ಸರ್ಪಗಳ ಗುಂಪು ಬಹಳ ನಿಷ್ಠೆಯಿಂದ ಕಾಪಾಡುತ್ತವೆ ಎಂಬ ದಂತಕಥೆಯಿದೆ. 6 ವರ್ಷಗಳ ಹಿಂದೆ 2018ರಲ್ಲಿ ಒಡಿಶಾ ಹೈಕೋರ್ಟ್‌ನ ಆದೇಶದ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಜಂಟಿ ತಂಡ ಮತ್ತು ಪುರಿಯ ಜಗನ್ನಾಥ ದೇವಾಲಯದ ಅಧಿಕಾರಿಗಳು ಅದರ ರಚನಾತ್ಮಕ ಸ್ಥಿತಿಯನ್ನು ಪರಿಶೀಲಿಸಲು ರತ್ನ ಭಂಡಾರಕ್ಕೆ ತೆರಳಿದರು.

ಆ ದೇಗುಲದ ಹೊರಗೆ ಭಕ್ತರು ಮತ್ತು ರಕ್ಷಣಾ ಸಿಬ್ಬಂದಿಗಳ ಗುಂಪಿನೊಂದಿಗೆ ಭುವನೇಶ್ವರದಿಂದ ವಿಶೇಷವಾಗಿ ಕರೆಸಲ್ಪಟ್ಟ ಇಬ್ಬರು ಪರಿಣಿತ ಹಾವು ಹಿಡಿಯುವವರು ಕೂಡ ಸಹಾಯ ಮಾಡಲು ಸಿದ್ಧರಾಗಿ ನಿಂತರು. ಆದರೆ ಹಳೆಯ ಭಂಡಾರದಲ್ಲಿ ಬೀಗದ ಕೊರತೆಯಿದ್ದ ಪರಿಣಾಮ ಅದನ್ನು ತೆಗೆಯಲು ಆಗಲಿಲ್ಲ. ಈಗ ನಾಳೆ ಜಗನ್ನಾಥ ದೇವಾಲಯದ ರತ್ನ ಭಂಡಾರದ ಒಳಗಿನ ಕೋಣೆಯನ್ನು ತೆರೆಯಲಾಗುವುದು. ಇನ್ನೂ ಈ ದೇವಾಲಯದ ಸಮಿತಿಯು ಎಲ್ಲಾ ಗಾತ್ರದ ಸರೀಸೃಪಗಳಿಂದ ಬೆದರಿಕೆಗೆ ಹೆದರುತ್ತಿದೆ. ಹಾವಿನ ಭೀತಿಯ ಜೊತೆಗೆ ಶಾಪದ ಭೀತಿಯೂ ಅವರನ್ನು ಕಾಡುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

7 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

7 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

8 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

17 hours ago