ದೇಶ- ವಿದೇಶ

ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನ ಹತ್ಯೆ

ಇಸ್ಲಾಮಾಬಾದ್:‌ ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ.

ಸೈಫುಲ್ಲಾ ಅಲಿಯಾಸ್‌ ಖಾಲಿದ್‌ ಎಂಬಾತ ಮೋಸ್ಟ್‌ ವಾಂಟೆಡ್‌ ಆಗಿದ್ದ ಲಷ್ಕರ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದ ಬಾದಿನ್‌ ಜಿಲ್ಲೆಯ ಮಟ್ಲಿ ತಾಲ್ಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ.

ಕಳೆದ 2001ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ಪಿಎಫ್‌ ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ 2006ರಲ್ಲಿ ನಾಗ್ಪುರದ ಆರ್‌ಎಸ್‌ಎಸ್‌ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್‌ ಪ್ರಮುಖ ಸಂಚುಕೋರನಾಗಿದ್ದ. 5 ವರ್ಷಗಳ ಅವಧಿಯಲ್ಲಿ ನಡೆದಿದ್ದ ಈ ಮೂರು ದಾಳಿಗಳು ಹಲವಾರು ಜೀವಗಳನ್ನು ಬಲಿ ಪಡೆದಿದ್ದವು.

ಆಂದೋಲನ ಡೆಸ್ಕ್

Recent Posts

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

30 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

4 hours ago