ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್ನಿಂದ ಬಂದ ಸುಮಾರು 25 ಜನರ ತೀರ್ಥಯಾತ್ರಿಕರನ್ನು ಹೊತ್ತ ದೋಣಿ ಪಿಪಾ (ತೇಲುವ) ವಂತೆನೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಹೇಳಿದ್ದಾರೆ.
ಪೊಲೀಸ್ ಮತ್ತು ರಕ್ಷಣಾ ತಂಡಗಳು ತಕ್ಷಣ ಕಾರ್ಯಾಚರಣೆ ನಡೆಸಿ 22 ಮಂದಿಯನ್ನು ನೀರಿನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದು, ಅವರ ಹುಡುಕಾಟ ಮುಂದುವರಿದಿದೆ. ಈ ಮಧ್ಯೆ ಆರು ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಮೃತರ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ. ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿದ್ದರಿಂದ ಪಲ್ಟಿಯಾಗಿದೆ ಎನ್ನಲಾಗಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…