ದೇಶ- ವಿದೇಶ

ಮೈಸೂರು-ದರ್ಭಾಂಗ ರೈಲು ಅಪಘಾತ ಪ್ರಕರಣ: ತನಿಖೆ ಪ್ರಾರಂಭಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆ

ಮೈಸೂರು: ತಮಿಳುನಾಡಿನಲ್ಲಿ ಅಕ್ಟೋಬರ್‌.11ರಂದು ನಡೆದ ಮೈಸೂರು-ದರ್ಭಾಂಗ ರೈಲು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ಪ್ರಾರಂಭಿಸಿದೆ.

ಇಂದು ಎನ್‌ಐಎ ತನಿಖಾ ತಂಡವೂ ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿಯಾಗಿ ದುರಂತ ನಡೆದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

ಈ ದುರಂತದ ಬಗ್ಗೆ ಈಗಾಗಲೇ ಕೊರುಕ್ಕುಪೇಟೆಯ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮಧ್ಯೆ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ ಅವರು, ರೈಲು ಅಪಘಾತಗಳನ್ನು ತಡೆಗಟ್ಟುವಂತೆ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ.

ಈ ಘಟನೆಯ ಬಗ್ಗೆ ರೈಲ್ವೆ ಮೂಲಗಳು ಸಿಗ್ನಲ್‌ ವೈಫಲ್ಯದಿಂದ ಅಪಘಾತವಾಗಿದೆ. ಏಕೆಂದರೆ ಎಕ್ಸ್‌ಪ್ರೆಸ್‌ ರೈಲು ರಾತ್ರಿ 8.27 ಗಂಟೆಗೆ ಪೊನ್ನೇರಿ ರೈಲು ನಿಲ್ದಾಣದ ಮೂಲಕ ಸಾಗಿತ್ತು. ಆ ನಂತರ ಮುಖ್ಯ ಮಾರ್ಗದಲ್ಲಿ ಮುಂದಿನ ನಿಲ್ದಾಣವಾದ ಕವರೈಪೆಟ್ಟೈಗೆ ತೆರಳಲು ಅನುಮತಿ ನೀಡಲಾಯಿತು ಎಂದು ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಆಗಂತುಕರು ಪೊನ್ನೆರಿ ಹಾಗೂ ಅನುಪಮ್‌ ಪಟ್ಟು ನಿಲ್ದಾಣಗಳ ಮಧ್ಯದಲ್ಲಿ ರೈಲು ಹಳಿ ತಪ್ಪಿಸಲು ಪ್ರಯತ್ನ ಮಾಡಿದ್ದರು. ಆದರೆ, ಅದೃಷ್ಟವಶಾತ್‌ ಯಾವುದೇ ಅನಾಹುತ ನಡೆದಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago