ದೇಶ- ವಿದೇಶ

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ.

ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿತ್ತು. ಅದರಂತೆ ಶುಕ್ರವಾರ ಪರಿಷ್ಕೃತ ದರ ಜಾರಿಯಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ.ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಹೊಸ ದರ ಇಂದಿನಿಂದ ಜಾರಿಗೆ ಬಂದಿದೆ.

ಇದನ್ನು ಓದಿ: ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಈ ವರ್ಷ ರೈಲು ದರದಲ್ಲಿ ಇದು ಎರಡನೇ ಹೆಚ್ಚಳವಾಗಿದೆ. ಹಿಂದಿನ ಹೆಚ್ಚಳ ಜುಲೈನಲ್ಲಿ ಆಗಿತ್ತು. 215 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕಾಗಿ, ಸಾಮಾನ್ಯ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಒಂದು ಪೈಸೆ, ಮೇಲ್?, ಎಕ್??ಪ್ರೆಸ್? ರೈಲುಗಳ ಎಸಿ ಅಲ್ಲದ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಎರಡು ಪೈಸೆ ಮತ್ತು ಎಲ್ಲಾ ರೈಲುಗಳ ಎಸಿ ವರ್ಗದ ದರವನ್ನು ಹೆಚ್ಚಿಸಲಾಗಿತ್ತು.

ಮುಂದಿನ ಪ್ರಯಾಣಕ್ಕಾಗಿ ಡಿಸೆಂಬರ್ 26 ರ ಮೊದಲು ಬುಕ್ ಮಾಡಿದ ಟಿಕೆಟ್‍ಗಳಿಗೆ ಈ ಬದಲಾವಣೆ ಅನ್ವಯಿಸುವುದಿಲ್ಲ. 215 ಕಿಲೋಮೀಟರ್ ದೂರದವರೆಗಿನ ಸಾಮಾನ್ಯ ದರ್ಜೆಯ ಟಿಕೆಟ್‍ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ 215 ಕಿಮೀಗಿಂತ ಹೆಚ್ಚಿನ ದೂರಕ್ಕೆ ಪ್ರತಿ ಕಿಮೀಗೆ 1 ಪೈಸೆ ವೆಚ್ಚವಾಗುತ್ತದೆ. ಮೇಲ್ ಅಥವಾ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಹವಾನಿಯಂತ್ರಿತವಲ್ಲದ ಕೋಚ್‍ಗಳಿಗೆ, ಪ್ರತಿ ಕಿಮೀಗೆ 2 ಪೈಸೆ ಹೆಚ್ಚಳವಾಗಲಿದೆ.‌

ಹವಾನಿಯಂತ್ರಿತ ಕೋಚ್‍ಗಳಲ್ಲಿ ಪ್ರಯಾಣದ ವೆಚ್ಚವನ್ನು ಸಹ ಪ್ರತಿ ಕಿಮೀಗೆ 2 ಪೈಸೆ ಹೆಚ್ಚಿಸಲಾಗಿದೆ.ಹೊಸ ದರಗಳು ಜಾರಿಗೆ ಬಂದ ನಂತರ ಹವಾನಿಯಂತ್ರಿತವಲ್ಲದ ಬೋಗಿಗಳಲ್ಲಿ 500 ಕಿ.ಮೀ ಪ್ರಯಾಣಕ್ಕೆ 10 ರೂ. ಹೆಚ್ಚಾಗಲಿದೆ. ಇದರಿಂದ ಪ್ರಯಾಣಿಕರಿಗೆ ಹೊರೆಯಾಗುವುದು ಖಚಿತವಾಗಿದೆ.

ಆಂದೋಲನ ಡೆಸ್ಕ್

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

2 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

2 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

2 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

3 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

3 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

4 hours ago