ದೇಶ- ವಿದೇಶ

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ.

ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿತ್ತು. ಅದರಂತೆ ಶುಕ್ರವಾರ ಪರಿಷ್ಕೃತ ದರ ಜಾರಿಯಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ.ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಹೊಸ ದರ ಇಂದಿನಿಂದ ಜಾರಿಗೆ ಬಂದಿದೆ.

ಇದನ್ನು ಓದಿ: ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಈ ವರ್ಷ ರೈಲು ದರದಲ್ಲಿ ಇದು ಎರಡನೇ ಹೆಚ್ಚಳವಾಗಿದೆ. ಹಿಂದಿನ ಹೆಚ್ಚಳ ಜುಲೈನಲ್ಲಿ ಆಗಿತ್ತು. 215 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕಾಗಿ, ಸಾಮಾನ್ಯ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಒಂದು ಪೈಸೆ, ಮೇಲ್?, ಎಕ್??ಪ್ರೆಸ್? ರೈಲುಗಳ ಎಸಿ ಅಲ್ಲದ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಎರಡು ಪೈಸೆ ಮತ್ತು ಎಲ್ಲಾ ರೈಲುಗಳ ಎಸಿ ವರ್ಗದ ದರವನ್ನು ಹೆಚ್ಚಿಸಲಾಗಿತ್ತು.

ಮುಂದಿನ ಪ್ರಯಾಣಕ್ಕಾಗಿ ಡಿಸೆಂಬರ್ 26 ರ ಮೊದಲು ಬುಕ್ ಮಾಡಿದ ಟಿಕೆಟ್‍ಗಳಿಗೆ ಈ ಬದಲಾವಣೆ ಅನ್ವಯಿಸುವುದಿಲ್ಲ. 215 ಕಿಲೋಮೀಟರ್ ದೂರದವರೆಗಿನ ಸಾಮಾನ್ಯ ದರ್ಜೆಯ ಟಿಕೆಟ್‍ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ 215 ಕಿಮೀಗಿಂತ ಹೆಚ್ಚಿನ ದೂರಕ್ಕೆ ಪ್ರತಿ ಕಿಮೀಗೆ 1 ಪೈಸೆ ವೆಚ್ಚವಾಗುತ್ತದೆ. ಮೇಲ್ ಅಥವಾ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಹವಾನಿಯಂತ್ರಿತವಲ್ಲದ ಕೋಚ್‍ಗಳಿಗೆ, ಪ್ರತಿ ಕಿಮೀಗೆ 2 ಪೈಸೆ ಹೆಚ್ಚಳವಾಗಲಿದೆ.‌

ಹವಾನಿಯಂತ್ರಿತ ಕೋಚ್‍ಗಳಲ್ಲಿ ಪ್ರಯಾಣದ ವೆಚ್ಚವನ್ನು ಸಹ ಪ್ರತಿ ಕಿಮೀಗೆ 2 ಪೈಸೆ ಹೆಚ್ಚಿಸಲಾಗಿದೆ.ಹೊಸ ದರಗಳು ಜಾರಿಗೆ ಬಂದ ನಂತರ ಹವಾನಿಯಂತ್ರಿತವಲ್ಲದ ಬೋಗಿಗಳಲ್ಲಿ 500 ಕಿ.ಮೀ ಪ್ರಯಾಣಕ್ಕೆ 10 ರೂ. ಹೆಚ್ಚಾಗಲಿದೆ. ಇದರಿಂದ ಪ್ರಯಾಣಿಕರಿಗೆ ಹೊರೆಯಾಗುವುದು ಖಚಿತವಾಗಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

1 hour ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

8 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

8 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

8 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

8 hours ago