ದೇಶ- ವಿದೇಶ

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ.

ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿತ್ತು. ಅದರಂತೆ ಶುಕ್ರವಾರ ಪರಿಷ್ಕೃತ ದರ ಜಾರಿಯಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ.ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಹೊಸ ದರ ಇಂದಿನಿಂದ ಜಾರಿಗೆ ಬಂದಿದೆ.

ಇದನ್ನು ಓದಿ: ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಈ ವರ್ಷ ರೈಲು ದರದಲ್ಲಿ ಇದು ಎರಡನೇ ಹೆಚ್ಚಳವಾಗಿದೆ. ಹಿಂದಿನ ಹೆಚ್ಚಳ ಜುಲೈನಲ್ಲಿ ಆಗಿತ್ತು. 215 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕಾಗಿ, ಸಾಮಾನ್ಯ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಒಂದು ಪೈಸೆ, ಮೇಲ್?, ಎಕ್??ಪ್ರೆಸ್? ರೈಲುಗಳ ಎಸಿ ಅಲ್ಲದ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಎರಡು ಪೈಸೆ ಮತ್ತು ಎಲ್ಲಾ ರೈಲುಗಳ ಎಸಿ ವರ್ಗದ ದರವನ್ನು ಹೆಚ್ಚಿಸಲಾಗಿತ್ತು.

ಮುಂದಿನ ಪ್ರಯಾಣಕ್ಕಾಗಿ ಡಿಸೆಂಬರ್ 26 ರ ಮೊದಲು ಬುಕ್ ಮಾಡಿದ ಟಿಕೆಟ್‍ಗಳಿಗೆ ಈ ಬದಲಾವಣೆ ಅನ್ವಯಿಸುವುದಿಲ್ಲ. 215 ಕಿಲೋಮೀಟರ್ ದೂರದವರೆಗಿನ ಸಾಮಾನ್ಯ ದರ್ಜೆಯ ಟಿಕೆಟ್‍ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ 215 ಕಿಮೀಗಿಂತ ಹೆಚ್ಚಿನ ದೂರಕ್ಕೆ ಪ್ರತಿ ಕಿಮೀಗೆ 1 ಪೈಸೆ ವೆಚ್ಚವಾಗುತ್ತದೆ. ಮೇಲ್ ಅಥವಾ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಹವಾನಿಯಂತ್ರಿತವಲ್ಲದ ಕೋಚ್‍ಗಳಿಗೆ, ಪ್ರತಿ ಕಿಮೀಗೆ 2 ಪೈಸೆ ಹೆಚ್ಚಳವಾಗಲಿದೆ.‌

ಹವಾನಿಯಂತ್ರಿತ ಕೋಚ್‍ಗಳಲ್ಲಿ ಪ್ರಯಾಣದ ವೆಚ್ಚವನ್ನು ಸಹ ಪ್ರತಿ ಕಿಮೀಗೆ 2 ಪೈಸೆ ಹೆಚ್ಚಿಸಲಾಗಿದೆ.ಹೊಸ ದರಗಳು ಜಾರಿಗೆ ಬಂದ ನಂತರ ಹವಾನಿಯಂತ್ರಿತವಲ್ಲದ ಬೋಗಿಗಳಲ್ಲಿ 500 ಕಿ.ಮೀ ಪ್ರಯಾಣಕ್ಕೆ 10 ರೂ. ಹೆಚ್ಚಾಗಲಿದೆ. ಇದರಿಂದ ಪ್ರಯಾಣಿಕರಿಗೆ ಹೊರೆಯಾಗುವುದು ಖಚಿತವಾಗಿದೆ.

ಆಂದೋಲನ ಡೆಸ್ಕ್

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

42 mins ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

50 mins ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

57 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

1 hour ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

14 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

16 hours ago