Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ರೈಲು ದುರಂತ: ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು; ರಾಹುಲ್‌ ವಾಗ್ದಾಳಿ

ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರಿ ರಾತ್ರಿ ಸು.8;24 ರಲ್ಲಿ ಮೈಸೂರು-ದರ್ಭಾಂಗ್‌ ಬಾಗ್‌ಮತಿ ಎಕ್ಸ್‌ಪ್ರೆಸ್‌, ಗೂಡ್ಸ್‌ ರೈಲಿಗೆ ಡಿಕ್ಕಿಯಾಗಿತ್ತು. ಸುಮಾರು 19ಮಂದಿ ಗಂಭೀರ ಗಾಯವಾಗಿದ್ದರು. ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಬೆಂಕಿಗಾಹುತವಾಗಿದ್ದವು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೊಸ್ಟ್‌ಮಾಡಿರುವ ರಾಹುಲ್‌ ಗಾಂಧಿ, ಈ ಅವಘಡವು ಒಡಿಶಾದ ಬಾಲೇಶ್ವರದಲ್ಲಿ ನಡೆದ ದುರ್ಘಟನೆಯನ್ನು ನಡನಪಿಸುವಂತಿದಿ ಎಂದಿದ್ದಾರೆ.

ಹಲವು ಅಪಘಾಯಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಸರ್ಕಾರ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉತ್ತನ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಒಡಿಶಾದ ಬಾಲೇಶ್ವರದಲ್ಲಿ 2ಎರಡು ರೈಲುಗಳು ಮತ್ತು ಗೂಡ್ಸ್‌ ರೈಲು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 293ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ 1,200ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.

 

Tags:
error: Content is protected !!