ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್ ರಾಯ್ ಅನ್ನು ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.
ಇಂದು (ಜ.18) ಕೋಲ್ಕತ್ತಾ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದಾರೆ. 57 ದಿನಗಳಲ್ಲಿ ತೀರ್ಪು ಪ್ರಕಟಿಸಿರುವುದು ವಿಶೇಷವಾಗಿದೆ. ಅತ್ಯಾಚಾರ, ಕೊಲೆ ಸೆಕ್ಷನ್ಗಳಲ್ಲಿ ಸಂಜಯ್ ರಾಯ್ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು ಸೋಮವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಟ್ರೈನಿ ವೈದ್ಯೆಯ ಅತ್ಯಚಾರ ಮತ್ತು ಕೊಲೆ ಪ್ರಕರಣ ಬಳಿಕ ದೇಶವ್ಯಾಪಿ ಪ್ರತಿಭಟನೆ ಆಗಿತ್ತು. ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಿದ ನಂತರ ಅತ್ಯಾಚಾರ ನಡೆದಿರುವುದು ಧೃಡ ಎಂದು ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು.
ಅತ್ಯಾಚಾರ ಪ್ರಕರಣ:
ಕಳೆದ ಆ.9ರಂದು ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಮೇಲೆ ಸಂಜಯ್ ರಾಯ್ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿದ್ದನು. ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದನು ಎಂಬುದನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದನು ಎಂದು ತನಿಖೆಯಿಂದ ತಿಳಿದು ಬಂದಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…