ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್ ರಾಯ್ ಅನ್ನು ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.
ಇಂದು (ಜ.18) ಕೋಲ್ಕತ್ತಾ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದಾರೆ. 57 ದಿನಗಳಲ್ಲಿ ತೀರ್ಪು ಪ್ರಕಟಿಸಿರುವುದು ವಿಶೇಷವಾಗಿದೆ. ಅತ್ಯಾಚಾರ, ಕೊಲೆ ಸೆಕ್ಷನ್ಗಳಲ್ಲಿ ಸಂಜಯ್ ರಾಯ್ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು ಸೋಮವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಟ್ರೈನಿ ವೈದ್ಯೆಯ ಅತ್ಯಚಾರ ಮತ್ತು ಕೊಲೆ ಪ್ರಕರಣ ಬಳಿಕ ದೇಶವ್ಯಾಪಿ ಪ್ರತಿಭಟನೆ ಆಗಿತ್ತು. ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಿದ ನಂತರ ಅತ್ಯಾಚಾರ ನಡೆದಿರುವುದು ಧೃಡ ಎಂದು ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು.
ಅತ್ಯಾಚಾರ ಪ್ರಕರಣ:
ಕಳೆದ ಆ.9ರಂದು ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಮೇಲೆ ಸಂಜಯ್ ರಾಯ್ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿದ್ದನು. ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದನು ಎಂಬುದನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದನು ಎಂದು ತನಿಖೆಯಿಂದ ತಿಳಿದು ಬಂದಿದೆ.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…