ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್ ರಾಯ್ ಅನ್ನು ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.
ಇಂದು (ಜ.18) ಕೋಲ್ಕತ್ತಾ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದಾರೆ. 57 ದಿನಗಳಲ್ಲಿ ತೀರ್ಪು ಪ್ರಕಟಿಸಿರುವುದು ವಿಶೇಷವಾಗಿದೆ. ಅತ್ಯಾಚಾರ, ಕೊಲೆ ಸೆಕ್ಷನ್ಗಳಲ್ಲಿ ಸಂಜಯ್ ರಾಯ್ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು ಸೋಮವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಟ್ರೈನಿ ವೈದ್ಯೆಯ ಅತ್ಯಚಾರ ಮತ್ತು ಕೊಲೆ ಪ್ರಕರಣ ಬಳಿಕ ದೇಶವ್ಯಾಪಿ ಪ್ರತಿಭಟನೆ ಆಗಿತ್ತು. ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಿದ ನಂತರ ಅತ್ಯಾಚಾರ ನಡೆದಿರುವುದು ಧೃಡ ಎಂದು ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು.
ಅತ್ಯಾಚಾರ ಪ್ರಕರಣ:
ಕಳೆದ ಆ.9ರಂದು ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಮೇಲೆ ಸಂಜಯ್ ರಾಯ್ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿದ್ದನು. ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದನು ಎಂಬುದನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದನು ಎಂದು ತನಿಖೆಯಿಂದ ತಿಳಿದು ಬಂದಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…