ಹೈದರಾಬಾದ್: ಅಲ್ಲು ಅರ್ಜುನ್ ನಟನೆಯ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಅಲ್ಲು ಅರವಿಂದ್ ಅವರು 2 ಕೋಟಿ ರೂ ಪರಿಹಾರವನ್ನು ಘೋಷಿಸಿದ್ದಾರೆ.
ಡಿಸೆಂಬರ್.4ರಂದು ಪುಷ್ಪ-2 ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ರೇವತಿ ಎಂಬುವವರು ಮೃತಪಟ್ಟಿದ್ದು, ರೇವತಿ ಪುತ್ರ ಶ್ರೀಜಾ ಕೂಡ ತೀವ್ರ ಗಂಭೀರ ಸ್ಥಿತಿಯಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ನಟ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ಈ ಹಿಂದೆ ಮೃತ ಮಹಿಳೆಯ ಕುಟುಂಬಸ್ಥರಿಗೆ 25 ಲಕ್ಷ ರೂ ಕೊಡುವುದಾಗಿ ತಿಳಿಸಿದ್ದರು. ಆದರೆ ಈಗ ಮೃತ ರೇವತಿ ಕುಟುಂಬಕ್ಕೆ 2 ಕೋಟಿ ರೂ ಪರಿಹಾರ ನೀಡುವುದಾಗಿ ಅಲ್ಲು ಅರವಿಂದ್ ತಿಳಿಸಿದ್ದಾರೆ.
ನಟ ಅಲ್ಲು ಅರ್ಜುನ್ ಕಡೆಯಿಂದ ಒಂದು ಕೋಟಿ ರೂ ಹಾಗೂ ಪುಷ್ಪ-2 ನಿರ್ಮಾಪಕರು ಮತ್ತು ನಿರ್ದೇಶಕ ಸುಕುಮಾರ್ ಕಡೆಯಿಂದ 1 ಕೋಟಿ ರೂಪಾಯಿಯನ್ನು ಮೃತ ಮಹಿಳೆ ಕುಟುಂಬಕ್ಕೆ ಕೊಡಲು ನಿರ್ಧರಿಸಿದ್ದಾರೆ.
ಡಿಸೆಂಬರ್.13ರಂದು ಥಿಯೇಟರ್ನಲ್ಲಿ ಕಾಲ್ತುಳಿತ ಸಂಬಂಧ ಅಲ್ಲು ಅರ್ಜುನ್ರನ್ನು ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದರು. ಬೇಲ್ ಸಿಕ್ಕ ಹಿನ್ನೆಲೆ ನಟ ಅಲ್ಲು ಅರ್ಜುನ್ ರಿಲೀಸ್ ಆಗಿದ್ದರು. ನಿನ್ನೆ ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಸತತ 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…