ನವದೆಹಲಿ: ವಿಶ್ವಸಂಸಸ್ಥೆಯ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಿದೆ.
ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನು ಟಿಆರ್ಎಫ್ ತನ್ನ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಕಟಿಸಿದ್ದು, ಈ ಕೃತ್ಯವನ್ನು ಪಾಕಿಸ್ತಾನ ಮೂಲಕ ಲಷ್ಕರ್ ಎ ತೈಬಾ ಬೆಂಬಲ ಇಲ್ಲದೇ ಮಾಡಲು ಸಾಧ್ಯವಿಲ್ಲ ಎಂದು ವರದಿ ಮಾಡಿದೆ. ಅಲ್ಲದೇ ಟಿಆರ್ಎಫ್ನ ಕಾರ್ಯತಂತ್ರದ ಬಗ್ಗೆಯೂ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ.
ಸಂಘಟನೆಯು ದಾಳಿಯ ಫೋಟೋಗಳನ್ನು ಪ್ರಕಟಿಸುವ ಮೂಲಕ ತನ್ನ ಉಪಸ್ಥಿತಿಯನ್ನು ಖಚಿತಪಡಿಸಲು ಮತ್ತು ಭಯದ ವಾತಾವರಣ ಸೃಷ್ಟಿಸಲು ಯತ್ನಿಸಿದೆ. ಈ ದಾಳಿಯ ಜವಾಬ್ದಾರಿಯನ್ನು ಎರಡು ಬಾರಿ ಹೇಳಿಕೊಂಡಿರುವುದು, ಸಂಘಟನೆಯ ಉದ್ದೇಶಿತ ಯೋಜನೆಯ ಭಾಗವಾಗಿದೆ ಎಂಬ ಅಂಶವನ್ನು ಯುಎನ್ಎಸ್ಸಿ ಗಮನಿಸಿದೆ. ಇದರೊಂದಿಗೆ ಟಿಆರ್ಎಫ್ನ ಈ ಕೃತ್ಯವು ಸ್ಥಳೀಯ ಜನತೆ ಹಾಗೂ ಪ್ರವಾಸಿಗರಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…