ನವದೆಹಲಿ: ವಿಶ್ವಸಂಸಸ್ಥೆಯ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಿದೆ.
ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನು ಟಿಆರ್ಎಫ್ ತನ್ನ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಕಟಿಸಿದ್ದು, ಈ ಕೃತ್ಯವನ್ನು ಪಾಕಿಸ್ತಾನ ಮೂಲಕ ಲಷ್ಕರ್ ಎ ತೈಬಾ ಬೆಂಬಲ ಇಲ್ಲದೇ ಮಾಡಲು ಸಾಧ್ಯವಿಲ್ಲ ಎಂದು ವರದಿ ಮಾಡಿದೆ. ಅಲ್ಲದೇ ಟಿಆರ್ಎಫ್ನ ಕಾರ್ಯತಂತ್ರದ ಬಗ್ಗೆಯೂ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ.
ಸಂಘಟನೆಯು ದಾಳಿಯ ಫೋಟೋಗಳನ್ನು ಪ್ರಕಟಿಸುವ ಮೂಲಕ ತನ್ನ ಉಪಸ್ಥಿತಿಯನ್ನು ಖಚಿತಪಡಿಸಲು ಮತ್ತು ಭಯದ ವಾತಾವರಣ ಸೃಷ್ಟಿಸಲು ಯತ್ನಿಸಿದೆ. ಈ ದಾಳಿಯ ಜವಾಬ್ದಾರಿಯನ್ನು ಎರಡು ಬಾರಿ ಹೇಳಿಕೊಂಡಿರುವುದು, ಸಂಘಟನೆಯ ಉದ್ದೇಶಿತ ಯೋಜನೆಯ ಭಾಗವಾಗಿದೆ ಎಂಬ ಅಂಶವನ್ನು ಯುಎನ್ಎಸ್ಸಿ ಗಮನಿಸಿದೆ. ಇದರೊಂದಿಗೆ ಟಿಆರ್ಎಫ್ನ ಈ ಕೃತ್ಯವು ಸ್ಥಳೀಯ ಜನತೆ ಹಾಗೂ ಪ್ರವಾಸಿಗರಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…