ದೇಶ- ವಿದೇಶ

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ ಸಿನಿಮಾಗೆ ಪ್ರತಿನಿತ್ಯ ಒಂದೊಂದು ಸಂಕಷ್ಟಗಳು ಎದುರಾಗುತ್ತಿವೆ.

ಜನವರಿ 9 ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದೀಗ ಸಿನಿಮಾದ ದೃಶ್ಯಗಳುಳ್ಳ ಐದು ನಿಮಿಷದ ವಿಡಿಯೊ ಕ್ಲಿಪ್‌ ಒಂದು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿರುವುದಾಗಿ ವರದಿಯಾಗಿದೆ.

ಏಪ್ರಿಲ್ 23 ರಂದು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಷ್ಟರಲ್ಲೇ ಸಿನಿಮಾದ ವಿಡಿಯೋ ಲೀಕ್‌ ಆಗಿರುವುದು ರಾಜಕೀಯ ವಲಯದಲ್ಲಿ ಸಂಚಲನಕ್ಕೂ ಕಾರಣವಾಗಿದೆ. ಚಿತ್ರವು ಸೆನ್ಸಾರ್ ನಲ್ಲಿರುವಾಗ ಸೋರಿಕೆ ಹೇಗೆ ಸಾಧ್ಯವಾಯಿತು? ಚಿತ್ರ ಲೀಕ್ ಆದ ನಂತರ, ಚುನಾವಣೆಯಲ್ಲಿ ಆಗುವ ಪರಿಣಾಮಗಳೇನು ಎನ್ನುವುದು ಸದ್ಯ ತಮಿಳುನಾಡಿನಲ್ಲಿ ಜನರ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

ವೃತ್ತಿಜೀವನದ ಕೊನೆಯ ಸಿನಿಮಾ
ಜನನಾಯಗನ್ ಸಿನಿಮಾ ತನ್ನ ವೃತ್ತಿ ಜೀವನದ ಕೊನೆಯ ಸಿನಿಮಾ ಎಂದೇ ದಳಪತಿ ವಿಜಯ್ ಹೇಳಿದ್ದರು. ರಾಜಕೀಯ ಎಂಟ್ರಿಗೆ ಲಾಭವಾಗಲಿ ಎನ್ನುವ ಕಾರಣಕ್ಕಾಗಿಯೇ ಮತ್ತು ಇದಕ್ಕೆ ಹೊಂದಿಕೊಳ್ಳುವ ಚಿತ್ರಕಥೆಯನ್ನ ಸಿನಿಮಾಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಚಿತ್ರದ ವಿಜಯ್ ಎಂಟ್ರಿ ಮತ್ತು ಕ್ಲೈಮ್ಯಾಕ್ಸ್’ನಲ್ಲಿ ಮತಯಾಚಿಸುವ ದೃಶ್ಯಗಳು ಈಗಾಗಲೇ ಲೀಕ್ ಆಗಿದ್ದವು. ಈಗ, ಚಿತ್ರದ ಇಡೀ ಹೆಚ್‌ಡಿ ಪ್ರಿಂಟ್, ಪೈರೇಟೆಡ್ ಸೈಟ್ ಗಳಲ್ಲಿ ಸೋರಿಕೆಯಾಗಿದೆ.

ವಿಜಯ್ ಅಭಿನಯದ ಜನನಾಯಗನ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ನಿರ್ಮಿಸಿದೆ. ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಂ ಮೆನನ್, ಪ್ರಕಾಶ್ ರಾಜ್, ನಾಸರ್, ಪ್ರಿಯಾಮಣಿ ಮುಂತಾದವರು ನಟಿಸಿದ್ದಾರೆ.

ʻಜನನಾಯಗನ್ʼʼ ಬೆನ್ನಿಗೆ ನಿಂತ ಸ್ಟಾರ್‌ ನಟರು
ಜನನಾಯಗನ್‌ ಸಿನಿಮಾದ ವಿಡಿಯೋ ತುಣುಕುಗಳು ಸೋರಿಕೆಯಾದ ಬಳಿಕ ಪೈರಸಿ ವಿರುದ್ಧ ಸೌತ್‌ನ ಸ್ಟಾರ್‌ ನಟರು ಆಕ್ರೋಶ ಹೊರಹಾಕಿದ್ದಾರೆ. ನಟ ಚಿರಂಜೀವಿ, ಶಿವಕಾರ್ತಿಕೇಯನ್‌, ವಿಜಯ್‌ ಆಂಟೊನಿ ಸೇರಿ ಹಲವು ನಟರು #KillPiracy ಎನ್ನುವ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್‌ ಹಂಚಿಕೊಂಡಿದ್ದು, ಪೈರಸಿ ಕೊಂದು ಸಿನಿಮಾ ಉಳಿಸಬೇಕೆಂದು ಕರೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

5 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

7 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

10 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

13 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

3 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

3 hours ago