ದೇಶ- ವಿದೇಶ

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ ಸಿನಿಮಾಗೆ ಪ್ರತಿನಿತ್ಯ ಒಂದೊಂದು ಸಂಕಷ್ಟಗಳು ಎದುರಾಗುತ್ತಿವೆ.

ಜನವರಿ 9 ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದೀಗ ಸಿನಿಮಾದ ದೃಶ್ಯಗಳುಳ್ಳ ಐದು ನಿಮಿಷದ ವಿಡಿಯೊ ಕ್ಲಿಪ್‌ ಒಂದು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿರುವುದಾಗಿ ವರದಿಯಾಗಿದೆ.

ಏಪ್ರಿಲ್ 23 ರಂದು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಷ್ಟರಲ್ಲೇ ಸಿನಿಮಾದ ವಿಡಿಯೋ ಲೀಕ್‌ ಆಗಿರುವುದು ರಾಜಕೀಯ ವಲಯದಲ್ಲಿ ಸಂಚಲನಕ್ಕೂ ಕಾರಣವಾಗಿದೆ. ಚಿತ್ರವು ಸೆನ್ಸಾರ್ ನಲ್ಲಿರುವಾಗ ಸೋರಿಕೆ ಹೇಗೆ ಸಾಧ್ಯವಾಯಿತು? ಚಿತ್ರ ಲೀಕ್ ಆದ ನಂತರ, ಚುನಾವಣೆಯಲ್ಲಿ ಆಗುವ ಪರಿಣಾಮಗಳೇನು ಎನ್ನುವುದು ಸದ್ಯ ತಮಿಳುನಾಡಿನಲ್ಲಿ ಜನರ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

ವೃತ್ತಿಜೀವನದ ಕೊನೆಯ ಸಿನಿಮಾ
ಜನನಾಯಗನ್ ಸಿನಿಮಾ ತನ್ನ ವೃತ್ತಿ ಜೀವನದ ಕೊನೆಯ ಸಿನಿಮಾ ಎಂದೇ ದಳಪತಿ ವಿಜಯ್ ಹೇಳಿದ್ದರು. ರಾಜಕೀಯ ಎಂಟ್ರಿಗೆ ಲಾಭವಾಗಲಿ ಎನ್ನುವ ಕಾರಣಕ್ಕಾಗಿಯೇ ಮತ್ತು ಇದಕ್ಕೆ ಹೊಂದಿಕೊಳ್ಳುವ ಚಿತ್ರಕಥೆಯನ್ನ ಸಿನಿಮಾಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಚಿತ್ರದ ವಿಜಯ್ ಎಂಟ್ರಿ ಮತ್ತು ಕ್ಲೈಮ್ಯಾಕ್ಸ್’ನಲ್ಲಿ ಮತಯಾಚಿಸುವ ದೃಶ್ಯಗಳು ಈಗಾಗಲೇ ಲೀಕ್ ಆಗಿದ್ದವು. ಈಗ, ಚಿತ್ರದ ಇಡೀ ಹೆಚ್‌ಡಿ ಪ್ರಿಂಟ್, ಪೈರೇಟೆಡ್ ಸೈಟ್ ಗಳಲ್ಲಿ ಸೋರಿಕೆಯಾಗಿದೆ.

ವಿಜಯ್ ಅಭಿನಯದ ಜನನಾಯಗನ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ನಿರ್ಮಿಸಿದೆ. ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಂ ಮೆನನ್, ಪ್ರಕಾಶ್ ರಾಜ್, ನಾಸರ್, ಪ್ರಿಯಾಮಣಿ ಮುಂತಾದವರು ನಟಿಸಿದ್ದಾರೆ.

ʻಜನನಾಯಗನ್ʼʼ ಬೆನ್ನಿಗೆ ನಿಂತ ಸ್ಟಾರ್‌ ನಟರು
ಜನನಾಯಗನ್‌ ಸಿನಿಮಾದ ವಿಡಿಯೋ ತುಣುಕುಗಳು ಸೋರಿಕೆಯಾದ ಬಳಿಕ ಪೈರಸಿ ವಿರುದ್ಧ ಸೌತ್‌ನ ಸ್ಟಾರ್‌ ನಟರು ಆಕ್ರೋಶ ಹೊರಹಾಕಿದ್ದಾರೆ. ನಟ ಚಿರಂಜೀವಿ, ಶಿವಕಾರ್ತಿಕೇಯನ್‌, ವಿಜಯ್‌ ಆಂಟೊನಿ ಸೇರಿ ಹಲವು ನಟರು #KillPiracy ಎನ್ನುವ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್‌ ಹಂಚಿಕೊಂಡಿದ್ದು, ಪೈರಸಿ ಕೊಂದು ಸಿನಿಮಾ ಉಳಿಸಬೇಕೆಂದು ಕರೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

15 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

44 mins ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago