ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ.
ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಘೋಷಣೆ ಮಾಡಿದ್ದಾರೆ.
ಆದ್ರೆ ಹಾರ್ಮುಜ್ ಜಲಸಂಧಿ ದಿಗ್ಬಂಧನ ಮುಂದುವರಿಯಲಿದೆ ಎಂದು ಟ್ರಂಪ್ ಹೇಳಿದ್ದಾರೆ.
7 ವಾರಗಳ ಯುದ್ಧದಲ್ಲಿ ಜನ ಮೃತಪಟ್ಟಿದ್ದು, ವಿಶ್ವದ ಆರ್ಥಿಕತೆ ಮೇಲೂ ದೊಡ್ಡ ಪೆಟ್ಟು ಬಿದ್ದಿದೆ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಸಂಧಾನ ಮಾತುಕತೆಗೆ ಅಮೆರಿಕ ಮುಂದಾಗಿದೆ. ಸದ್ಯ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ಟಂಪ್ ಹೇಳಿದ್ದೇನು?
ಕದನ ವಿರಾಮ ವಿಸ್ತರಣೆ ಬಗ್ಗೆ ಮಾತನಾಡಿರುವ ಟ್ರಂಪ್, ಪಾಕಿಸ್ತಾನದ ಮನವಿ ಸ್ವೀಕರಿಸಿ, ಅದರ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿ, ಇರಾನ್ ನಾಯಕರು ಒಪ್ಪಂದಕ್ಕೆ ಮುಂದೆ ಬರುವವರೆಗೂ ದಾಳಿಯನ್ನ ತಡೆಯಲಾಗುವುದು ಎಂದಿದ್ದಾರೆ. ಇದೇ ವೇಳೆ ಇರಾನ್ ಬಂದರುಗಳಿಗೆ ದಿಗ್ಬಂಧನ ಹಾಕಿರುವ ಅಮೆರಿಕದ ನೌಕಾ ಸೇನಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದಿದ್ದಾರೆ.
ಇದಕ್ಕೆ ಇರಾನ್ ಪ್ರಮುಖ ನಾಯಕರು ತಕ್ಷಣದ ಪ್ರತಿಕ್ರಿಯೆ ಏನೂ ನೀಡಿಲ್ಲ. ಆದರೆ ಮಾಧ್ಯಮಗಳ ಪ್ರಕಾರ ಟೆಹ್ರಾನ್ ಕಡೆಯಿಂದ ಕದನ ವಿರಾಮಕ್ಕೆ ಯಾವುದೇ ಮನವಿ ಮಾಡಿರಲಿಲ್ಲ ಎಂದು ಹೇಳಿದೆ. ಇರಾನ್ ಜೊತೆಗಿನ ಸಂಧಾನ ಮುಗಿಯುವವರೆಗೆ ಕದನ ವಿರಾಮ ಮುಂದುವರಿಯಲಿದೆ ಎಂದು ಟ್ರಂಪ್ ಹೇಳಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…