ದೇಶ- ವಿದೇಶ

ಇರಾನ್‌ ಜೊತೆಗಿನ ಯುದ್ಧ ವಿರಾಮ ಅನಿರ್ದಿಷ್ಟಾವಧಿಗೆ ವಿಸ್ತರಣೆ : ಟ್ರಂಪ್‌ ಘೋಷಣೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ.

ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಘೋಷಣೆ ಮಾಡಿದ್ದಾರೆ.

ಆದ್ರೆ ಹಾರ್ಮುಜ್‌ ಜಲಸಂಧಿ ದಿಗ್ಬಂಧನ ಮುಂದುವರಿಯಲಿದೆ ಎಂದು‌ ಟ್ರಂಪ್‌ ಹೇಳಿದ್ದಾರೆ.

7 ವಾರಗಳ ಯುದ್ಧದಲ್ಲಿ ಜನ ಮೃತಪಟ್ಟಿದ್ದು, ವಿಶ್ವದ ಆರ್ಥಿಕತೆ ಮೇಲೂ ದೊಡ್ಡ ಪೆಟ್ಟು ಬಿದ್ದಿದೆ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಸಂಧಾನ ಮಾತುಕತೆಗೆ ಅಮೆರಿಕ ಮುಂದಾಗಿದೆ. ಸದ್ಯ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಟಂಪ್‌ ಹೇಳಿದ್ದೇನು?
ಕದನ ವಿರಾಮ ವಿಸ್ತರಣೆ ಬಗ್ಗೆ ಮಾತನಾಡಿರುವ ಟ್ರಂಪ್‌, ಪಾಕಿಸ್ತಾನದ ಮನವಿ ಸ್ವೀಕರಿಸಿ, ಅದರ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿ, ಇರಾನ್ ನಾಯಕರು ಒಪ್ಪಂದಕ್ಕೆ ಮುಂದೆ ಬರುವವರೆಗೂ ದಾಳಿಯನ್ನ ತಡೆಯಲಾಗುವುದು ಎಂದಿದ್ದಾರೆ. ಇದೇ ವೇಳೆ ಇರಾನ್ ಬಂದರುಗಳಿಗೆ ದಿಗ್ಬಂಧನ ಹಾಕಿರುವ ಅಮೆರಿಕದ ನೌಕಾ ಸೇನಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದಿದ್ದಾರೆ.

ಇದಕ್ಕೆ ಇರಾನ್ ಪ್ರಮುಖ ನಾಯಕರು ತಕ್ಷಣದ ಪ್ರತಿಕ್ರಿಯೆ ಏನೂ ನೀಡಿಲ್ಲ. ಆದರೆ ಮಾಧ್ಯಮಗಳ ಪ್ರಕಾರ ಟೆಹ್ರಾನ್ ಕಡೆಯಿಂದ ಕದನ ವಿರಾಮಕ್ಕೆ ಯಾವುದೇ ಮನವಿ ಮಾಡಿರಲಿಲ್ಲ ಎಂದು ಹೇಳಿದೆ. ಇರಾನ್ ಜೊತೆಗಿನ ಸಂಧಾನ ಮುಗಿಯುವವರೆಗೆ ಕದನ ವಿರಾಮ ಮುಂದುವರಿಯಲಿದೆ ಎಂದು ಟ್ರಂಪ್ ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

16 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago