ದೇಶ- ವಿದೇಶ

ಇರಾನ್‌ ಜೊತೆಗಿನ ಯುದ್ಧ ವಿರಾಮ ಅನಿರ್ದಿಷ್ಟಾವಧಿಗೆ ವಿಸ್ತರಣೆ : ಟ್ರಂಪ್‌ ಘೋಷಣೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ.

ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಘೋಷಣೆ ಮಾಡಿದ್ದಾರೆ.

ಆದ್ರೆ ಹಾರ್ಮುಜ್‌ ಜಲಸಂಧಿ ದಿಗ್ಬಂಧನ ಮುಂದುವರಿಯಲಿದೆ ಎಂದು‌ ಟ್ರಂಪ್‌ ಹೇಳಿದ್ದಾರೆ.

7 ವಾರಗಳ ಯುದ್ಧದಲ್ಲಿ ಜನ ಮೃತಪಟ್ಟಿದ್ದು, ವಿಶ್ವದ ಆರ್ಥಿಕತೆ ಮೇಲೂ ದೊಡ್ಡ ಪೆಟ್ಟು ಬಿದ್ದಿದೆ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಸಂಧಾನ ಮಾತುಕತೆಗೆ ಅಮೆರಿಕ ಮುಂದಾಗಿದೆ. ಸದ್ಯ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಟಂಪ್‌ ಹೇಳಿದ್ದೇನು?
ಕದನ ವಿರಾಮ ವಿಸ್ತರಣೆ ಬಗ್ಗೆ ಮಾತನಾಡಿರುವ ಟ್ರಂಪ್‌, ಪಾಕಿಸ್ತಾನದ ಮನವಿ ಸ್ವೀಕರಿಸಿ, ಅದರ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿ, ಇರಾನ್ ನಾಯಕರು ಒಪ್ಪಂದಕ್ಕೆ ಮುಂದೆ ಬರುವವರೆಗೂ ದಾಳಿಯನ್ನ ತಡೆಯಲಾಗುವುದು ಎಂದಿದ್ದಾರೆ. ಇದೇ ವೇಳೆ ಇರಾನ್ ಬಂದರುಗಳಿಗೆ ದಿಗ್ಬಂಧನ ಹಾಕಿರುವ ಅಮೆರಿಕದ ನೌಕಾ ಸೇನಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದಿದ್ದಾರೆ.

ಇದಕ್ಕೆ ಇರಾನ್ ಪ್ರಮುಖ ನಾಯಕರು ತಕ್ಷಣದ ಪ್ರತಿಕ್ರಿಯೆ ಏನೂ ನೀಡಿಲ್ಲ. ಆದರೆ ಮಾಧ್ಯಮಗಳ ಪ್ರಕಾರ ಟೆಹ್ರಾನ್ ಕಡೆಯಿಂದ ಕದನ ವಿರಾಮಕ್ಕೆ ಯಾವುದೇ ಮನವಿ ಮಾಡಿರಲಿಲ್ಲ ಎಂದು ಹೇಳಿದೆ. ಇರಾನ್ ಜೊತೆಗಿನ ಸಂಧಾನ ಮುಗಿಯುವವರೆಗೆ ಕದನ ವಿರಾಮ ಮುಂದುವರಿಯಲಿದೆ ಎಂದು ಟ್ರಂಪ್ ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

9 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

22 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

22 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

22 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

22 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

22 hours ago