ದೇಶ- ವಿದೇಶ

ಭಾರತದ ಮೇಲೆ ಸುಂಕಾಸ್ತ್ರ : ಟ್ರಂಪ್ ಸಮರ್ಥನೆ

ವಾಷಿಂಗ್ಟನ್ : ಅಮೆರಿಕ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ಹೇಳುವ ಮೂಲಕ ಭಾರತದ ವಿರುದ್ಧ ಆರೋಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪುನರುಚ್ಚರಿಸಿದ್ದಾರೆ.

ಶ್ವೇತಭವನದಲ್ಲಿ ಮಾಧ್ಯಮಗಳು ಕೇಳಿದ ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಚಿಂತನೆ ನಡೆಸುತ್ತಿದ್ದೀರಾ ಎಂಬ ಪ್ರಶ್ನೆಗೆ ಟ್ರಂಪ್ ಅವರು ಉತ್ತರಿಸಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್‌ ಹಾಗೂ ನಟ ಅನಿರುದ್ಧ್‌

ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಯಾವುದೇ ಚಿಂತನೆಗಳೂ ಇಲ್ಲ. ನಾವು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ. ಆದರೆ, ಹಲವು ವರ್ಷಗಳಿಂದ ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧ ಏಪಕ್ಷೀಯವಾಗಿದ್ದು, ನಾನು ಅಧಿಕಾರಕ್ಕೆ ಬಂದ ಬಳಿಕ ಎಲ್ಲವೂ ಬದಲಾಯಿತು ಎಂದು ಹೇಳಿದ್ದಾರೆ.

ಭಾರತ ನಮಗೆ ಅಪಾರ ಸುಂಕಗಳನ್ನು ವಿಧಿಸುತ್ತಿತ್ತು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ, ಆದ್ದರಿಂದ ಅಮೆರಿಕ ಭಾರತದೊಂದಿಗೆ ಹೆಚ್ಚು ವ್ಯವಹಾರ ಮಾಡುತ್ತಿಲ್ಲ. ಭಾರತದ ಜೊತೆ ನಮ್ಮ ವ್ಯಾಪಾರ-ವ್ಯವಹಾರ ತುಂಬಾ ಕಡಿಮೆ ಇದೆ. ಅವರು (ಭಾರತ) ನಮ್ಮಲ್ಲಿ ಅಪಾರ ಪ್ರಮಾಣದ ವ್ಯಾಪಾರ ಮಾಡುತ್ತಿದ್ದಾರೆ. ನಮ್ಮ ಪಾಲು ತುಂಬಾ ಕಡಿಮೆ ಇದೆ.

ಸರಳವಾಗಿ ಹೇಳುವುದಾದರೆ ಭಾರತ ಬೃಹತ್ ಪ್ರಮಾಣದ ಸರಕು ರಫ್ತು ಮಾಡುತ್ತಿದೆ. ನಮ್ಮ ವಸ್ತುಗಳ ರಫ್ತು ಪ್ರಮಾಣ ತುಂಬಾ ಕಡಿಮೆ ಇದೆ. ಜೊತೆಗೆ ನಮ್ಮ ವಸ್ತುಗಳ ಮೇಲೆ ಭಾರತದಲ್ಲಿ ಅತ್ಯಧಿಕ ಸುಂಕ ವಿಧಿಸಲಾಗುತ್ತಿದೆ. ಕಳೆದ ಕೆಲವು ದಶಗಳಿಂದ ನಡೆಯುತ್ತಿರುವ ಏಕಪಕ್ಷೀಯ ವ್ಯಾಪಾರ ನೀತಿ ಸರಿದೂಗಿಸಲು ಹೆಚ್ಚುವರಿ ಸುಂಕ ವಿಧಿಸಲಾಗಿದೆ. ಮೂರ್ಖತನದಿಂದ ನಾವು ಅವರಿಗೆ ಹೆಚ್ಚಿನ ತೆರಿಗೆ ವಿಧಿಸುತ್ತಿಲ್ಲ ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

4 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

6 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

6 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

7 hours ago