ದೇಶ- ವಿದೇಶ

ಭಾರತದ ಮೇಲೆ ಸುಂಕಾಸ್ತ್ರ : ಟ್ರಂಪ್ ಸಮರ್ಥನೆ

ವಾಷಿಂಗ್ಟನ್ : ಅಮೆರಿಕ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ಹೇಳುವ ಮೂಲಕ ಭಾರತದ ವಿರುದ್ಧ ಆರೋಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪುನರುಚ್ಚರಿಸಿದ್ದಾರೆ.

ಶ್ವೇತಭವನದಲ್ಲಿ ಮಾಧ್ಯಮಗಳು ಕೇಳಿದ ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಚಿಂತನೆ ನಡೆಸುತ್ತಿದ್ದೀರಾ ಎಂಬ ಪ್ರಶ್ನೆಗೆ ಟ್ರಂಪ್ ಅವರು ಉತ್ತರಿಸಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್‌ ಹಾಗೂ ನಟ ಅನಿರುದ್ಧ್‌

ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಯಾವುದೇ ಚಿಂತನೆಗಳೂ ಇಲ್ಲ. ನಾವು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ. ಆದರೆ, ಹಲವು ವರ್ಷಗಳಿಂದ ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧ ಏಪಕ್ಷೀಯವಾಗಿದ್ದು, ನಾನು ಅಧಿಕಾರಕ್ಕೆ ಬಂದ ಬಳಿಕ ಎಲ್ಲವೂ ಬದಲಾಯಿತು ಎಂದು ಹೇಳಿದ್ದಾರೆ.

ಭಾರತ ನಮಗೆ ಅಪಾರ ಸುಂಕಗಳನ್ನು ವಿಧಿಸುತ್ತಿತ್ತು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ, ಆದ್ದರಿಂದ ಅಮೆರಿಕ ಭಾರತದೊಂದಿಗೆ ಹೆಚ್ಚು ವ್ಯವಹಾರ ಮಾಡುತ್ತಿಲ್ಲ. ಭಾರತದ ಜೊತೆ ನಮ್ಮ ವ್ಯಾಪಾರ-ವ್ಯವಹಾರ ತುಂಬಾ ಕಡಿಮೆ ಇದೆ. ಅವರು (ಭಾರತ) ನಮ್ಮಲ್ಲಿ ಅಪಾರ ಪ್ರಮಾಣದ ವ್ಯಾಪಾರ ಮಾಡುತ್ತಿದ್ದಾರೆ. ನಮ್ಮ ಪಾಲು ತುಂಬಾ ಕಡಿಮೆ ಇದೆ.

ಸರಳವಾಗಿ ಹೇಳುವುದಾದರೆ ಭಾರತ ಬೃಹತ್ ಪ್ರಮಾಣದ ಸರಕು ರಫ್ತು ಮಾಡುತ್ತಿದೆ. ನಮ್ಮ ವಸ್ತುಗಳ ರಫ್ತು ಪ್ರಮಾಣ ತುಂಬಾ ಕಡಿಮೆ ಇದೆ. ಜೊತೆಗೆ ನಮ್ಮ ವಸ್ತುಗಳ ಮೇಲೆ ಭಾರತದಲ್ಲಿ ಅತ್ಯಧಿಕ ಸುಂಕ ವಿಧಿಸಲಾಗುತ್ತಿದೆ. ಕಳೆದ ಕೆಲವು ದಶಗಳಿಂದ ನಡೆಯುತ್ತಿರುವ ಏಕಪಕ್ಷೀಯ ವ್ಯಾಪಾರ ನೀತಿ ಸರಿದೂಗಿಸಲು ಹೆಚ್ಚುವರಿ ಸುಂಕ ವಿಧಿಸಲಾಗಿದೆ. ಮೂರ್ಖತನದಿಂದ ನಾವು ಅವರಿಗೆ ಹೆಚ್ಚಿನ ತೆರಿಗೆ ವಿಧಿಸುತ್ತಿಲ್ಲ ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

3 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

5 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

5 hours ago