ದೇಶ- ವಿದೇಶ

ಭಾರತದ ಮೇಲೆ ಸುಂಕಾಸ್ತ್ರ : ಟ್ರಂಪ್ ಸಮರ್ಥನೆ

ವಾಷಿಂಗ್ಟನ್ : ಅಮೆರಿಕ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ಹೇಳುವ ಮೂಲಕ ಭಾರತದ ವಿರುದ್ಧ ಆರೋಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪುನರುಚ್ಚರಿಸಿದ್ದಾರೆ.

ಶ್ವೇತಭವನದಲ್ಲಿ ಮಾಧ್ಯಮಗಳು ಕೇಳಿದ ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಚಿಂತನೆ ನಡೆಸುತ್ತಿದ್ದೀರಾ ಎಂಬ ಪ್ರಶ್ನೆಗೆ ಟ್ರಂಪ್ ಅವರು ಉತ್ತರಿಸಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್‌ ಹಾಗೂ ನಟ ಅನಿರುದ್ಧ್‌

ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಯಾವುದೇ ಚಿಂತನೆಗಳೂ ಇಲ್ಲ. ನಾವು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ. ಆದರೆ, ಹಲವು ವರ್ಷಗಳಿಂದ ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧ ಏಪಕ್ಷೀಯವಾಗಿದ್ದು, ನಾನು ಅಧಿಕಾರಕ್ಕೆ ಬಂದ ಬಳಿಕ ಎಲ್ಲವೂ ಬದಲಾಯಿತು ಎಂದು ಹೇಳಿದ್ದಾರೆ.

ಭಾರತ ನಮಗೆ ಅಪಾರ ಸುಂಕಗಳನ್ನು ವಿಧಿಸುತ್ತಿತ್ತು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ, ಆದ್ದರಿಂದ ಅಮೆರಿಕ ಭಾರತದೊಂದಿಗೆ ಹೆಚ್ಚು ವ್ಯವಹಾರ ಮಾಡುತ್ತಿಲ್ಲ. ಭಾರತದ ಜೊತೆ ನಮ್ಮ ವ್ಯಾಪಾರ-ವ್ಯವಹಾರ ತುಂಬಾ ಕಡಿಮೆ ಇದೆ. ಅವರು (ಭಾರತ) ನಮ್ಮಲ್ಲಿ ಅಪಾರ ಪ್ರಮಾಣದ ವ್ಯಾಪಾರ ಮಾಡುತ್ತಿದ್ದಾರೆ. ನಮ್ಮ ಪಾಲು ತುಂಬಾ ಕಡಿಮೆ ಇದೆ.

ಸರಳವಾಗಿ ಹೇಳುವುದಾದರೆ ಭಾರತ ಬೃಹತ್ ಪ್ರಮಾಣದ ಸರಕು ರಫ್ತು ಮಾಡುತ್ತಿದೆ. ನಮ್ಮ ವಸ್ತುಗಳ ರಫ್ತು ಪ್ರಮಾಣ ತುಂಬಾ ಕಡಿಮೆ ಇದೆ. ಜೊತೆಗೆ ನಮ್ಮ ವಸ್ತುಗಳ ಮೇಲೆ ಭಾರತದಲ್ಲಿ ಅತ್ಯಧಿಕ ಸುಂಕ ವಿಧಿಸಲಾಗುತ್ತಿದೆ. ಕಳೆದ ಕೆಲವು ದಶಗಳಿಂದ ನಡೆಯುತ್ತಿರುವ ಏಕಪಕ್ಷೀಯ ವ್ಯಾಪಾರ ನೀತಿ ಸರಿದೂಗಿಸಲು ಹೆಚ್ಚುವರಿ ಸುಂಕ ವಿಧಿಸಲಾಗಿದೆ. ಮೂರ್ಖತನದಿಂದ ನಾವು ಅವರಿಗೆ ಹೆಚ್ಚಿನ ತೆರಿಗೆ ವಿಧಿಸುತ್ತಿಲ್ಲ ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

5 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

6 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

10 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

10 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

10 hours ago