ದೇಶ- ವಿದೇಶ

ಭಾರತದ ಮೇಲೆ ಸುಂಕಾಸ್ತ್ರ : ಟ್ರಂಪ್ ಸಮರ್ಥನೆ

ವಾಷಿಂಗ್ಟನ್ : ಅಮೆರಿಕ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ಹೇಳುವ ಮೂಲಕ ಭಾರತದ ವಿರುದ್ಧ ಆರೋಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪುನರುಚ್ಚರಿಸಿದ್ದಾರೆ.

ಶ್ವೇತಭವನದಲ್ಲಿ ಮಾಧ್ಯಮಗಳು ಕೇಳಿದ ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಚಿಂತನೆ ನಡೆಸುತ್ತಿದ್ದೀರಾ ಎಂಬ ಪ್ರಶ್ನೆಗೆ ಟ್ರಂಪ್ ಅವರು ಉತ್ತರಿಸಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್‌ ಹಾಗೂ ನಟ ಅನಿರುದ್ಧ್‌

ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಯಾವುದೇ ಚಿಂತನೆಗಳೂ ಇಲ್ಲ. ನಾವು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ. ಆದರೆ, ಹಲವು ವರ್ಷಗಳಿಂದ ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧ ಏಪಕ್ಷೀಯವಾಗಿದ್ದು, ನಾನು ಅಧಿಕಾರಕ್ಕೆ ಬಂದ ಬಳಿಕ ಎಲ್ಲವೂ ಬದಲಾಯಿತು ಎಂದು ಹೇಳಿದ್ದಾರೆ.

ಭಾರತ ನಮಗೆ ಅಪಾರ ಸುಂಕಗಳನ್ನು ವಿಧಿಸುತ್ತಿತ್ತು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ, ಆದ್ದರಿಂದ ಅಮೆರಿಕ ಭಾರತದೊಂದಿಗೆ ಹೆಚ್ಚು ವ್ಯವಹಾರ ಮಾಡುತ್ತಿಲ್ಲ. ಭಾರತದ ಜೊತೆ ನಮ್ಮ ವ್ಯಾಪಾರ-ವ್ಯವಹಾರ ತುಂಬಾ ಕಡಿಮೆ ಇದೆ. ಅವರು (ಭಾರತ) ನಮ್ಮಲ್ಲಿ ಅಪಾರ ಪ್ರಮಾಣದ ವ್ಯಾಪಾರ ಮಾಡುತ್ತಿದ್ದಾರೆ. ನಮ್ಮ ಪಾಲು ತುಂಬಾ ಕಡಿಮೆ ಇದೆ.

ಸರಳವಾಗಿ ಹೇಳುವುದಾದರೆ ಭಾರತ ಬೃಹತ್ ಪ್ರಮಾಣದ ಸರಕು ರಫ್ತು ಮಾಡುತ್ತಿದೆ. ನಮ್ಮ ವಸ್ತುಗಳ ರಫ್ತು ಪ್ರಮಾಣ ತುಂಬಾ ಕಡಿಮೆ ಇದೆ. ಜೊತೆಗೆ ನಮ್ಮ ವಸ್ತುಗಳ ಮೇಲೆ ಭಾರತದಲ್ಲಿ ಅತ್ಯಧಿಕ ಸುಂಕ ವಿಧಿಸಲಾಗುತ್ತಿದೆ. ಕಳೆದ ಕೆಲವು ದಶಗಳಿಂದ ನಡೆಯುತ್ತಿರುವ ಏಕಪಕ್ಷೀಯ ವ್ಯಾಪಾರ ನೀತಿ ಸರಿದೂಗಿಸಲು ಹೆಚ್ಚುವರಿ ಸುಂಕ ವಿಧಿಸಲಾಗಿದೆ. ಮೂರ್ಖತನದಿಂದ ನಾವು ಅವರಿಗೆ ಹೆಚ್ಚಿನ ತೆರಿಗೆ ವಿಧಿಸುತ್ತಿಲ್ಲ ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago