ದೇಶ- ವಿದೇಶ

ಟ್ರಂಪ್‌ ಕಸರತ್ತು ವ್ಯರ್ಥ ; ಮರಿಯಾ ಕೊರಿನಾ ಮಚಾದೊಗೆ ಒಲಿದ ನೊಬೆಲ್‌ ಶಾಂತಿ ಪ್ರಶಸ್ತಿ..

ನ್ಯೂಯಾರ್ಕ್‌ : ನೊಬೆಲ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆ ಉಂಟಾಗಿದೆ. ಈ ಬಾರಿಯ(2025ರ) ನೊಬೆಲ್ ಶಾಂತಿ ಪ್ರಶಸ್ತಿಯು ದಿಟ್ಟ ಹೋರಾಟಗಾರ್ತಿ, ಕೈಗಾರಿಕಾ ಎಂಜಿನಿಯರ್‌ ಮತ್ತು ರಾಜಕಾರಣಿ ಮರಿಯಾ ಕೊರಿನಾ ಮಚಾದೊಗೆ ಒಲಿದಿದೆ.

ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಲ್ಪಿಸಲು ಅವಿಶ್ರಮವಾಗಿ ಶ್ರಮಿಸಿ ಮತ್ತು ದೇಶದಲ್ಲಿ ಸರ್ವಾಧಿಕಾರವನ್ನು ಹೋಗಲಾಡಿಸಿ ಪ್ರಜಾಪ್ರಭುತ್ವದ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಮಾಡಿದ ಹೋರಾಟಕ್ಕಾಗಿ ಮರಿಯಾ ಕೊರಿನಾ ಮಚಾದೊ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲು ನೊಬೆಲ್ ಸಮಿತಿ ನಿರ್ಧರಿಸಿದೆ.

ಈ ಘೋಷಣೆಯೊಂದಿಗೆ ಕಳೆದ ಕೆಲವು ದಿನಗಳಿಂದ ನೊಬೆಲ್ ಪ್ರಶಸ್ತಿ ಸ್ಪರ್ಧೆಯಲ್ಲಿ ತನ್ನ ಪರ ಹಕ್ಕು ಚಲಾಯಿಸುತ್ತಿದ್ದ ಸ್ವಘೋಷಿತ ಶಾಂತಿದೂತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕಾಣುತ್ತಿದ್ದ ನೊಬೆಲ್ ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಂಡಂತಾಗಿದೆ.

ಇದನ್ನು ಓದಿ : ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ಕೊರಿನಾ ಮಚಾದೊ ಅವರು ಕಳೆದ ವರ್ಷದಿಂದ ತಲೆಮರೆಸಿಕೊಳ್ಳುವಂತೆ ಒತ್ತಾಯಿಸಲ್ಪಟ್ಟಿದ್ದರೂ ತಮ್ಮ ಹೋರಾಟವನ್ನು ಮುಂದುವರೆಸಿದ್ದರು. ಅವರ ಜೀವಕ್ಕೆ ಗಂಭೀರ ಬೆದರಿಕೆಗಳಿದ್ದರೂ, ಅವರು ದೇಶದಲ್ಲೇ ಇದ್ದರು. ಅವರ ಆಯ್ಕೆಯು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ನೊಬೆಲ್ ಸಮಿತಿ ತಿಳಿಸಿದೆ.

ಧೈರ್ಯ ಮತ್ತು ದೃಢನಿಶ್ಚಯದ ಸಂಕೇತ
ಸರ್ವಾಧಿಕಾರಿ ಶಕ್ತಿಗಳು ಅಧಿಕಾರವನ್ನು ವಶಪಡಿಸಿಕೊಂಡಾಗ, ಎದ್ದು ನಿಂತು ವಿರೋಧಿಸುವ ಸ್ವಾತಂತ್ರ್ಯದ ಧೈರ್ಯಶಾಲಿ ರಕ್ಷಕರನ್ನು ಗುರುತಿಸುವುದು ಮುಖ್ಯ ಎಂದು ಹೇಳುವ ಮೂಲಕ ನೊಬೆಲ್ ಸಮಿತಿಯು ಮರಿಯಾ ಕೊರಿನಾ ಮಚಾದೊ ಅವರ ಧೈರ್ಯವನ್ನು ಶ್ಲಾಘಿಸಿದೆ. ಮೌನವಾಗಿರಲು ನಿರಾಕರಿಸುವವರ ಮೇಲೆ, ಗಂಭೀರ ಅಪಾಯಗಳ ಹೊರತಾಗಿಯೂ ಮುಂದೆ ಹೆಜ್ಜೆ ಹಾಕುವ ಧೈರ್ಯ ಮಾಡುವವರ ಮೇಲೆ ಮತ್ತು ಸ್ವಾತಂತ್ರ್ಯವನ್ನು ಎಂದಿಗೂ ಲಘುವಾಗಿ ಪರಿಗಣಿಸಬಾರದು, ಆದರೆ ಯಾವಾಗಲೂ ಮಾತು, ಧೈರ್ಯ ಮತ್ತು ದೃಢಸಂಕಲ್ಪದಿಂದ ರಕ್ಷಿಸಿಕೊಳ್ಳಬೇಕು ಎಂದು ನಮಗೆ ನೆನಪಿಸುವವರ ಮೇಲೆ ಪ್ರಜಾಪ್ರಭುತ್ವ ಅವಲಂಬಿತವಾಗಿದೆ’ ಎಂದು ಸಮಿತಿ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

3 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

4 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

5 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

6 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

7 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

7 hours ago