ದೇಶ- ವಿದೇಶ

ಟ್ರಂಪ್‌ ಕಸರತ್ತು ವ್ಯರ್ಥ ; ಮರಿಯಾ ಕೊರಿನಾ ಮಚಾದೊಗೆ ಒಲಿದ ನೊಬೆಲ್‌ ಶಾಂತಿ ಪ್ರಶಸ್ತಿ..

ನ್ಯೂಯಾರ್ಕ್‌ : ನೊಬೆಲ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆ ಉಂಟಾಗಿದೆ. ಈ ಬಾರಿಯ(2025ರ) ನೊಬೆಲ್ ಶಾಂತಿ ಪ್ರಶಸ್ತಿಯು ದಿಟ್ಟ ಹೋರಾಟಗಾರ್ತಿ, ಕೈಗಾರಿಕಾ ಎಂಜಿನಿಯರ್‌ ಮತ್ತು ರಾಜಕಾರಣಿ ಮರಿಯಾ ಕೊರಿನಾ ಮಚಾದೊಗೆ ಒಲಿದಿದೆ.

ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಲ್ಪಿಸಲು ಅವಿಶ್ರಮವಾಗಿ ಶ್ರಮಿಸಿ ಮತ್ತು ದೇಶದಲ್ಲಿ ಸರ್ವಾಧಿಕಾರವನ್ನು ಹೋಗಲಾಡಿಸಿ ಪ್ರಜಾಪ್ರಭುತ್ವದ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಮಾಡಿದ ಹೋರಾಟಕ್ಕಾಗಿ ಮರಿಯಾ ಕೊರಿನಾ ಮಚಾದೊ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲು ನೊಬೆಲ್ ಸಮಿತಿ ನಿರ್ಧರಿಸಿದೆ.

ಈ ಘೋಷಣೆಯೊಂದಿಗೆ ಕಳೆದ ಕೆಲವು ದಿನಗಳಿಂದ ನೊಬೆಲ್ ಪ್ರಶಸ್ತಿ ಸ್ಪರ್ಧೆಯಲ್ಲಿ ತನ್ನ ಪರ ಹಕ್ಕು ಚಲಾಯಿಸುತ್ತಿದ್ದ ಸ್ವಘೋಷಿತ ಶಾಂತಿದೂತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕಾಣುತ್ತಿದ್ದ ನೊಬೆಲ್ ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಂಡಂತಾಗಿದೆ.

ಇದನ್ನು ಓದಿ : ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ಕೊರಿನಾ ಮಚಾದೊ ಅವರು ಕಳೆದ ವರ್ಷದಿಂದ ತಲೆಮರೆಸಿಕೊಳ್ಳುವಂತೆ ಒತ್ತಾಯಿಸಲ್ಪಟ್ಟಿದ್ದರೂ ತಮ್ಮ ಹೋರಾಟವನ್ನು ಮುಂದುವರೆಸಿದ್ದರು. ಅವರ ಜೀವಕ್ಕೆ ಗಂಭೀರ ಬೆದರಿಕೆಗಳಿದ್ದರೂ, ಅವರು ದೇಶದಲ್ಲೇ ಇದ್ದರು. ಅವರ ಆಯ್ಕೆಯು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ನೊಬೆಲ್ ಸಮಿತಿ ತಿಳಿಸಿದೆ.

ಧೈರ್ಯ ಮತ್ತು ದೃಢನಿಶ್ಚಯದ ಸಂಕೇತ
ಸರ್ವಾಧಿಕಾರಿ ಶಕ್ತಿಗಳು ಅಧಿಕಾರವನ್ನು ವಶಪಡಿಸಿಕೊಂಡಾಗ, ಎದ್ದು ನಿಂತು ವಿರೋಧಿಸುವ ಸ್ವಾತಂತ್ರ್ಯದ ಧೈರ್ಯಶಾಲಿ ರಕ್ಷಕರನ್ನು ಗುರುತಿಸುವುದು ಮುಖ್ಯ ಎಂದು ಹೇಳುವ ಮೂಲಕ ನೊಬೆಲ್ ಸಮಿತಿಯು ಮರಿಯಾ ಕೊರಿನಾ ಮಚಾದೊ ಅವರ ಧೈರ್ಯವನ್ನು ಶ್ಲಾಘಿಸಿದೆ. ಮೌನವಾಗಿರಲು ನಿರಾಕರಿಸುವವರ ಮೇಲೆ, ಗಂಭೀರ ಅಪಾಯಗಳ ಹೊರತಾಗಿಯೂ ಮುಂದೆ ಹೆಜ್ಜೆ ಹಾಕುವ ಧೈರ್ಯ ಮಾಡುವವರ ಮೇಲೆ ಮತ್ತು ಸ್ವಾತಂತ್ರ್ಯವನ್ನು ಎಂದಿಗೂ ಲಘುವಾಗಿ ಪರಿಗಣಿಸಬಾರದು, ಆದರೆ ಯಾವಾಗಲೂ ಮಾತು, ಧೈರ್ಯ ಮತ್ತು ದೃಢಸಂಕಲ್ಪದಿಂದ ರಕ್ಷಿಸಿಕೊಳ್ಳಬೇಕು ಎಂದು ನಮಗೆ ನೆನಪಿಸುವವರ ಮೇಲೆ ಪ್ರಜಾಪ್ರಭುತ್ವ ಅವಲಂಬಿತವಾಗಿದೆ’ ಎಂದು ಸಮಿತಿ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

1 hour ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

1 hour ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

1 hour ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

2 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

2 hours ago