ದೇಶ- ವಿದೇಶ

ಟ್ರಂಪ್‌ ಕಸರತ್ತು ವ್ಯರ್ಥ ; ಮರಿಯಾ ಕೊರಿನಾ ಮಚಾದೊಗೆ ಒಲಿದ ನೊಬೆಲ್‌ ಶಾಂತಿ ಪ್ರಶಸ್ತಿ..

ನ್ಯೂಯಾರ್ಕ್‌ : ನೊಬೆಲ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆ ಉಂಟಾಗಿದೆ. ಈ ಬಾರಿಯ(2025ರ) ನೊಬೆಲ್ ಶಾಂತಿ ಪ್ರಶಸ್ತಿಯು ದಿಟ್ಟ ಹೋರಾಟಗಾರ್ತಿ, ಕೈಗಾರಿಕಾ ಎಂಜಿನಿಯರ್‌ ಮತ್ತು ರಾಜಕಾರಣಿ ಮರಿಯಾ ಕೊರಿನಾ ಮಚಾದೊಗೆ ಒಲಿದಿದೆ.

ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಲ್ಪಿಸಲು ಅವಿಶ್ರಮವಾಗಿ ಶ್ರಮಿಸಿ ಮತ್ತು ದೇಶದಲ್ಲಿ ಸರ್ವಾಧಿಕಾರವನ್ನು ಹೋಗಲಾಡಿಸಿ ಪ್ರಜಾಪ್ರಭುತ್ವದ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಮಾಡಿದ ಹೋರಾಟಕ್ಕಾಗಿ ಮರಿಯಾ ಕೊರಿನಾ ಮಚಾದೊ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲು ನೊಬೆಲ್ ಸಮಿತಿ ನಿರ್ಧರಿಸಿದೆ.

ಈ ಘೋಷಣೆಯೊಂದಿಗೆ ಕಳೆದ ಕೆಲವು ದಿನಗಳಿಂದ ನೊಬೆಲ್ ಪ್ರಶಸ್ತಿ ಸ್ಪರ್ಧೆಯಲ್ಲಿ ತನ್ನ ಪರ ಹಕ್ಕು ಚಲಾಯಿಸುತ್ತಿದ್ದ ಸ್ವಘೋಷಿತ ಶಾಂತಿದೂತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕಾಣುತ್ತಿದ್ದ ನೊಬೆಲ್ ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಂಡಂತಾಗಿದೆ.

ಇದನ್ನು ಓದಿ : ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ಕೊರಿನಾ ಮಚಾದೊ ಅವರು ಕಳೆದ ವರ್ಷದಿಂದ ತಲೆಮರೆಸಿಕೊಳ್ಳುವಂತೆ ಒತ್ತಾಯಿಸಲ್ಪಟ್ಟಿದ್ದರೂ ತಮ್ಮ ಹೋರಾಟವನ್ನು ಮುಂದುವರೆಸಿದ್ದರು. ಅವರ ಜೀವಕ್ಕೆ ಗಂಭೀರ ಬೆದರಿಕೆಗಳಿದ್ದರೂ, ಅವರು ದೇಶದಲ್ಲೇ ಇದ್ದರು. ಅವರ ಆಯ್ಕೆಯು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ನೊಬೆಲ್ ಸಮಿತಿ ತಿಳಿಸಿದೆ.

ಧೈರ್ಯ ಮತ್ತು ದೃಢನಿಶ್ಚಯದ ಸಂಕೇತ
ಸರ್ವಾಧಿಕಾರಿ ಶಕ್ತಿಗಳು ಅಧಿಕಾರವನ್ನು ವಶಪಡಿಸಿಕೊಂಡಾಗ, ಎದ್ದು ನಿಂತು ವಿರೋಧಿಸುವ ಸ್ವಾತಂತ್ರ್ಯದ ಧೈರ್ಯಶಾಲಿ ರಕ್ಷಕರನ್ನು ಗುರುತಿಸುವುದು ಮುಖ್ಯ ಎಂದು ಹೇಳುವ ಮೂಲಕ ನೊಬೆಲ್ ಸಮಿತಿಯು ಮರಿಯಾ ಕೊರಿನಾ ಮಚಾದೊ ಅವರ ಧೈರ್ಯವನ್ನು ಶ್ಲಾಘಿಸಿದೆ. ಮೌನವಾಗಿರಲು ನಿರಾಕರಿಸುವವರ ಮೇಲೆ, ಗಂಭೀರ ಅಪಾಯಗಳ ಹೊರತಾಗಿಯೂ ಮುಂದೆ ಹೆಜ್ಜೆ ಹಾಕುವ ಧೈರ್ಯ ಮಾಡುವವರ ಮೇಲೆ ಮತ್ತು ಸ್ವಾತಂತ್ರ್ಯವನ್ನು ಎಂದಿಗೂ ಲಘುವಾಗಿ ಪರಿಗಣಿಸಬಾರದು, ಆದರೆ ಯಾವಾಗಲೂ ಮಾತು, ಧೈರ್ಯ ಮತ್ತು ದೃಢಸಂಕಲ್ಪದಿಂದ ರಕ್ಷಿಸಿಕೊಳ್ಳಬೇಕು ಎಂದು ನಮಗೆ ನೆನಪಿಸುವವರ ಮೇಲೆ ಪ್ರಜಾಪ್ರಭುತ್ವ ಅವಲಂಬಿತವಾಗಿದೆ’ ಎಂದು ಸಮಿತಿ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

10 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

10 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

11 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

11 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

11 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

12 hours ago