ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.
ಬೀಜಿಂಗ್ನ ಗ್ರೇಟ್ ಹಾಲ್ ಆಫ್ ಪೀಪಲ್ನಲ್ಲಿ ನಡೆದ ಐತಿಹಾಸಿಕ ಜಿ-2 (G2) ಶೃಂಗಸಭೆಯ ಆರಂಭಿಕ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ.
ಜಿನ್ಪಿಂಗ್ ಅವರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ನಿಮ್ಮೊಂದಿಗೆ ಇರುವುದು ಮತ್ತು ನಿಮ್ಮ ಸ್ನೇಹಿತನಾಗಿರುವುದು ನನಗೆ ಹೆಮ್ಮೆಯ ವಿಷಯ. ಚೀನಾ ಮತ್ತು ಅಮೆರಿಕ ನಡುವಿನ ಸಂಬಂಧವು ಹಿಂದೆಂದಿಗಿಂತಲೂ ಉತ್ತಮವಾಗಲಿದೆ ಎಂದು ಆಶಾವಾದವನ್ನು ವ್ಯಕ್ತಪಡಿಸಿದರು.
ನಾನು ಜಿನ್ಪಿಂಗ್ ಅವರನ್ನು ಒಬ್ಬ ಶ್ರೇಷ್ಠ ನಾಯಕ ಎಂದು ಎಲ್ಲರ ಬಳಿ ಹೇಳುತ್ತೇನೆ. ಕೆಲವರಿಗೆ ನಾನು ಹೀಗೆ ಹೇಳುವುದು ಇಷ್ಟವಾಗುವುದಿಲ್ಲ, ಆದರೆ ಇದು ಸತ್ಯ. ನಾನು ಕೇವಲ ಸತ್ಯವನ್ನಷ್ಟೇ ಹೇಳುತ್ತೇನೆ ಎಂದರು.
ತನಗೆ ನೀಡಲಾದ ಅದ್ಧೂರಿ ರಾಜತಾಂತ್ರಿಕ ಸ್ವಾಗತವನ್ನು ನೋಡಿ, ಇದು ಕೆಲವೇ ಜನರಿಗೆ ಮಾತ್ರ ಸಿಗುವಂತಹ ಅತ್ಯುನ್ನತ ಗೌರವ ಎಂದು ಸಂತಸ ವ್ಯಕ್ತಪಡಿಸಿದರು. ಚೀನಾ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡುತ್ತಾ, ನೀವು ಮಾಡಿರುವ ಕೆಲಸಗಳ ಬಗ್ಗೆ ಮತ್ತು ಚೀನಾದ ಮೇಲೆ ನನಗೆ ಅಪಾರ ಗೌರವವಿದೆ ಎಂದು ಹರ್ಷಿಸಿದರು.
ತನ್ನೊಂದಿಗೆ ಬಂದಿರುವ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್, ಆಪಲ್ ಸಿಇಒ ಟಿಮ್ ಕುಕ್ ಮತ್ತು ಎನ್ವಿಡಿಯಾ ಮುಖ್ಯಸ್ಥ ಜೆನ್ಸನ್ ಹುವಾಂಗ್ ಅವರಂತಹ ಬಿಲಿಯನೇರ್ ಉದ್ಯಮಿಗಳನ್ನು ಜಿನ್ಪಿಂಗ್ಗೆ ಪರಿಚಯಿಸುತ್ತಾ, ನಾನು ಜಗತ್ತಿನ ಅತ್ಯುತ್ತಮ ಉದ್ಯಮಿಗಳನ್ನು ಇಲ್ಲಿಗೆ ಕರೆತಂದಿದ್ದೇನೆ. ನಿಮಗೆ ಗೌರವ ಸಲ್ಲಿಸಲು ಕೇವಲ ಪ್ರಮುಖ ವ್ಯಕ್ತಿಗಳು ಮಾತ್ರ ಇಲ್ಲಿಗೆ ಬಂದಿದ್ದಾರೆ ಎಂದು ತಿಳಿಸಿದರು.
ಜಿನ್ಪಿಂಗ್ ಹೇಳಿದ್ದೇನು?
ಟ್ರಂಪ್ ಮೆಚ್ಚುಗೆಗೆ ಪ್ರತಿಯಾಗಿ ಮಾತನಾಡಿದ ಕ್ಸಿ ಜಿನ್ಪಿಂಗ್, ಚೀನಾ ಮತ್ತು ಅಮೆರಿಕ ದೇಶಗಳು ಪರಸ್ಪರ ಪ್ರತಿಸ್ಪರ್ಧಿಗಳಾಗುವ ಬದಲು ಪಾಲುದಾರರಾಗಬೇಕು ಎಂದು ಕರೆ ನೀಡಿದರು.
ವಿಶ್ವವು ಇಂದು ಒಂದು ಹೊಸ ಜಾಗತಿಕ ಅಡ್ಡರಸ್ತೆಯಲ್ಲಿದೆ ಮತ್ತು ಇಡೀ ಜಗತ್ತು ಈ ಮಹತ್ವದ ಸಭೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಚೀನಾ-ಅಮೆರಿಕ ನಡುವಿನ ಸದೃಢ ಮತ್ತು ಸ್ಥಿರವಾದ ಬಾಂಧವ್ಯವು ಇಡೀ ಜಗತ್ತಿಗೆ ಸಿಗುವ ಒಂದು ದೊಡ್ಡ ವರ ಎಂದು ಬಣ್ಣಿಸಿದರು.
ಉದಯೋನ್ಮುಖ ಶಕ್ತಿಯೊಂದು ಹಳೆಯ ಬಲಿಷ್ಠ ಶಕ್ತಿಯನ್ನು ಮೀರಿಸಲು ಹೊರಟಾಗ ಸಂಘರ್ಷ ಅನಿವಾರ್ಯ ಎಂಬ ಜಾಗತಿಕ ರಾಜತಾಂತ್ರಿಕ ಸಿದ್ಧಾಂತವನ್ನು ಎರಡೂ ದೇಶಗಳು ಮೀರಿ ನಿಲ್ಲಬೇಕಿದೆ. ನಾವು ಪರಸ್ಪರ ಯಶಸ್ಸನ್ನು ಸಾಧಿಸುತ್ತಾ, ಒಟ್ಟಿಗೆ ಅಭಿವೃದ್ಧಿ ಹೊಂದುವ ಹೊಸ ಮಾದರಿಯ ಬಲಿಷ್ಠ ರಾಷ್ಟ್ರಗಳ ಸಂಬಂಧವನ್ನು ಜಗತ್ತಿಗೆ ಪರಿಚಯಿಸಬೇಕು ಎಂದು ಕರೆ ನೀಡಿದರು.
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…
ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…