ದೇಶ- ವಿದೇಶ

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ಮುಂದಿಟ್ಟಿದೆ. ‌

ಪಾಕಿಸ್ತಾನದ ಮಧ್ಯವರ್ತಿಗಳ ಮೂಲಕ ತಲುಪಿಸಲಾದ ಈ ಪ್ರಸ್ತಾವನೆಯಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಪೂರ್ಣವಾಗಿ ನಿಲ್ಲಿಸುವುದು, ಸಮೃದ್ಧ ಯುರೇನಿಯಂ ಅನ್ನು IAEAಗೆ ಹಸ್ತಾಂತರಿಸುವುದು, ನ್ಯಾಟಾಂಜ್, ಫೊರ್ಡೋ, ಇಸ್ಫಹಾನ್‌ನಂತಹ ಪರಮಾಣು ಸೈಟ್‌ಗಳನ್ನು ಮುಚ್ಚುವುದು, ಬ್ಯಾಲಿಸ್ಟಿಕ್ ಕ್ಷಿಪಣಿ ನಿಲ್ಲಿಸುವುದು ಹಾಗೂ ಹೊರ್ಮುಜ್‌ ಜಲಸಂಧಿಯನ್ನು ಸಂಚಾರಮುಕ್ತಗೊಳಿಸಿವುದು ಸೇರಿವೆ.

ಆದರೆ ಈ ಪ್ರಸ್ತಾವವನ್ನು ಅಣಕಿಸಿರುವ ಇರಾನ್‌ ಮಿಲಿಟರಿ ವಕ್ತಾರರು, ಈ 15 ಅಂಶಗಳ ಯೋಜನೆ ಯಶಸ್ವಿಯಾಗುವ ಅವಕಾಶವಿದೆಯೇ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಆಂತರಿಕ ಸಂಘರ್ಷಗಳು ನಿಮ್ಮೊಂದಿಗೆ ನೀವೇ ಮಾತುಕತೆ ನಡೆಸುವ ಹಂತಕ್ಕೆ ತಲುಪಿವೆಯೇ? ಎಂದು ವ್ಯಂಗ್ಯ ಮಾಡಿರುವ ಇರಾನ್‌, ಅಮೆರಿಕಾ-ಇಸ್ರೇಲ್ ಅನ್ನು ಮಂಡಿಯೂರಿಸುವವರೆಗೆ ಒಪ್ಪಂದ ಸಾಧ್ಯವಿಲ್ಲ ಎಂದಿದೆ.

 

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

15 mins ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

27 mins ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

38 mins ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

39 mins ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

45 mins ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

48 mins ago