ದೇಶ- ವಿದೇಶ

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ಮುಂದಿಟ್ಟಿದೆ. ‌

ಪಾಕಿಸ್ತಾನದ ಮಧ್ಯವರ್ತಿಗಳ ಮೂಲಕ ತಲುಪಿಸಲಾದ ಈ ಪ್ರಸ್ತಾವನೆಯಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಪೂರ್ಣವಾಗಿ ನಿಲ್ಲಿಸುವುದು, ಸಮೃದ್ಧ ಯುರೇನಿಯಂ ಅನ್ನು IAEAಗೆ ಹಸ್ತಾಂತರಿಸುವುದು, ನ್ಯಾಟಾಂಜ್, ಫೊರ್ಡೋ, ಇಸ್ಫಹಾನ್‌ನಂತಹ ಪರಮಾಣು ಸೈಟ್‌ಗಳನ್ನು ಮುಚ್ಚುವುದು, ಬ್ಯಾಲಿಸ್ಟಿಕ್ ಕ್ಷಿಪಣಿ ನಿಲ್ಲಿಸುವುದು ಹಾಗೂ ಹೊರ್ಮುಜ್‌ ಜಲಸಂಧಿಯನ್ನು ಸಂಚಾರಮುಕ್ತಗೊಳಿಸಿವುದು ಸೇರಿವೆ.

ಆದರೆ ಈ ಪ್ರಸ್ತಾವವನ್ನು ಅಣಕಿಸಿರುವ ಇರಾನ್‌ ಮಿಲಿಟರಿ ವಕ್ತಾರರು, ಈ 15 ಅಂಶಗಳ ಯೋಜನೆ ಯಶಸ್ವಿಯಾಗುವ ಅವಕಾಶವಿದೆಯೇ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಆಂತರಿಕ ಸಂಘರ್ಷಗಳು ನಿಮ್ಮೊಂದಿಗೆ ನೀವೇ ಮಾತುಕತೆ ನಡೆಸುವ ಹಂತಕ್ಕೆ ತಲುಪಿವೆಯೇ? ಎಂದು ವ್ಯಂಗ್ಯ ಮಾಡಿರುವ ಇರಾನ್‌, ಅಮೆರಿಕಾ-ಇಸ್ರೇಲ್ ಅನ್ನು ಮಂಡಿಯೂರಿಸುವವರೆಗೆ ಒಪ್ಪಂದ ಸಾಧ್ಯವಿಲ್ಲ ಎಂದಿದೆ.

 

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago